6:42 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಪ್ರಿಯಕರನ ಜತೆ ಅಸ್ಸಾಂನಿಂದ ಬಂದ ಅಪ್ರಾಪ್ತ ವಯಸ್ಸಿನ ಗೃಹಿಣಿ ಮಂಗಳೂರಿನಲ್ಲಿ ಹೆಣವಾದಳು!: ಇದು ಆತ್ಮಹತ್ಯೆಯೇ? ಕೊಲೆಯೇ?

21/01/2022, 22:09

ಮಂಗಳೂರು(reporterkarnataka.com): ಪ್ರೀತಿಸಿ ದೂರದ ಅಸ್ಸಾಂನಿಂದ ಪ್ರಿಯಕರನ ಜತೆ ಓಡಿ ಬಂದಿದ್ದ ಅಪ್ರಾಪ್ತ ವಯಸ್ಸಿನ ಗೃಹಿಣಿಯೊಬ್ಬಳು ನಗರದ ಕುದ್ರೋಳಿಯ ಬಾಡಿಗೆ ಮನೆಯಲ್ಲಿ ಹೆಣವಾಗಿ ಪತ್ತೆಯಾಗಿದ್ದಾಳೆ.

ಅಸ್ಸಾಂ ಮೂಲದ ಸುಫಿಯಾ(17) ಎಂಬಾಕೆ ಸೈದುಲ್ಲಾ ಎಂಬಾತನ ಪ್ರೀತಿಸಿ ಮದುವೆಯಾಗಿದ್ದಳು. ಅವರು ನಗರದ ಕುದ್ರೋಳಿ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು. 

ಇಂದು ಅಪ್ರಾಪ್ತ ಗೃಹಿಣಿಯ ಮೃತದೇಹ ಕುತ್ತಿಗೆಗೆ ಶಾಲು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮನೆಯಲ್ಲಿದ್ದ ಪತಿ ಸೈದುಲ್ಲಾ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪತಿಯೇ ಕುತ್ತಿಗೆಗೆ ಶಾಲು ಬಿಗಿದು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಬೆಳಗ್ಗೆ 6 ಗಂಟೆಗೆ ಸೈದುಲ್ಲಾ ನೆರೆ ಮನೆಗೆ ಬಂದು, ತನ್ನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮಾಹಿತಿ ನೀಡಿದ್ದಾನೆ. ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೆನ್ ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಸುಫಿಯಾ ಮತ್ತು ಸೈದುಲ್ಲಾ ಪ್ರೀತಿಸಿ ಮನೆ ಬಿಟ್ಟು ಓಡಿ ಬಂದು ಮಂಗಳೂರಿನ ಕುದ್ರೋಳಿಯಲ್ಲಿ ನೆಲೆಸಿದ್ದರು. ಸೈದುಲ್ಲಾ ಪೈಟಿಂಗ್ ಕೆಲಸ ಮಾಡುತ್ತಿದ್ದ. ಆತನೊಂದಿಗೆ ಇತರ ಇಬ್ಬರು ಸ್ನೇಹಿತರು ಕೂಡ ಇದ್ದರು. ಅವರು ಕೂಡ ಇದೆ ಮನೆಯಲ್ಲಿ ನೆಲೆಸಿದ್ದರು. ಅವರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದು ಕೊಲೆಯೇ ಅಥವಾ ಆತ್ಮಹತ್ಯೆಯೇ ಎಂಬುದು ಇನ್ನೂ ನಿಖರವಾಗಿ ತಿಳಿದುಬಂದಿಲ್ಲ. 

ಬಂದರು ಠಾಣೆ ಪೊಲೀಸರು ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು