6:13 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಪ್ರೊ.ಪಿ.ಎಲ್.ಧರ್ಮ ಮಂಗಳೂರು ವಿವಿಯ 10ನೇ ಕುಲಪತಿಯಾಗಿ ನೇಮಕ

05/03/2024, 22:40

 

ಮಂಗಳೂರು (Reporter Karnataka): ಮಂಗಳೂರು ವಿಶ್ವವಿದ್ಯಾನಿಲಯದ 10ನೇ ಕುಲಪತಿಯಾಗಿ ವಿವಿಯ ಮಾಜಿ ಕುಲಸಚಿವ (ಪರೀಕ್ಷಾಂಗ), ರಾಜ್ಯಶಾಸ್ತ್ರ ಉಪನ್ಯಾಸಕ ಪ್ರೊ. ಪಿ.ಎಲ್. ಧರ್ಮ ಅವರು ಮಂಗಳವಾರ ಪ್ರಭಾರ ಕುಲಪತಿ ಪ್ರೊ. ಜಯರಾಜ್ ಅಮಿನ್ ಅವರಿಂದ ಅಧಿಕಾರ ವಹಿಸಿಕೊಂಡರು.

4 ವರ್ಷಗಳಿಂದ ಮಂಗಳೂರು ವಿ.ವಿ. ಕುಲಪತಿಯಾಗಿದ್ದ ಪ್ರೊ|ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಕಳೆದ ವರ್ಷ ಜೂ.2ರಂದು ಸೇವಾ ನಿವೃತ್ತಿ ಹೊಂದಿದ್ದರು. ಬಳಿಕ ಕುಲಪತಿ ಹುದ್ದೆ ಖಾಲಿ ಇತ್ತು. ಮಂಗಳೂರು ವಿ.ವಿ. ರಾಜ್ಯಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಹಾಗೂ ಕಲಾ ನಿಕಾಯದ ಡೀನ್‌ ಪ್ರೊ| ಜಯರಾಜ್‌ ಅಮೀನ್‌ ಅವರು ಜೂ.2ರಿಂದ “ಪ್ರಭಾರ ಕುಲಪತಿ’ಗಳಾಗಿ ಕರ್ತವ್ಯದಲ್ಲಿದ್ದರು.

ಅಧಿಕಾರ ಸ್ವೀಕರಿಸಿದ ದಿನದಿಂದ ನಾಲ್ಕು ವರ್ಷಗಳವರೆಗೆ ಅಥವಾ 67 ವರ್ಷ ಭರ್ತಿಯಾಗುವವರೆಗೆ, ಇವೆರಡಲ್ಲಿ ಯಾವುದು ಮೊದಲೋ ಆ ದಿನಾಂಕದವರೆಗೆ ಪ್ರೊ.ಪಿ.ಎಲ್.ಧರ್ಮ ಕುಲಪತಿಯಾಗಿ ಮುಂದುವರಿಯಲಿದ್ದಾರೆ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿರುವ ರಾಜ್ಯಪಾಲ ಥಾವರಚಂದ್‌ ಗೆಹ್ಲೋಠ್ ಮಂಗಳವಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು