2:46 PM Monday22 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ಪ್ರೊ.ಪಿ.ಎಲ್.ಧರ್ಮ ಮಂಗಳೂರು ವಿವಿಯ 10ನೇ ಕುಲಪತಿಯಾಗಿ ನೇಮಕ

05/03/2024, 22:40

 

ಮಂಗಳೂರು (Reporter Karnataka): ಮಂಗಳೂರು ವಿಶ್ವವಿದ್ಯಾನಿಲಯದ 10ನೇ ಕುಲಪತಿಯಾಗಿ ವಿವಿಯ ಮಾಜಿ ಕುಲಸಚಿವ (ಪರೀಕ್ಷಾಂಗ), ರಾಜ್ಯಶಾಸ್ತ್ರ ಉಪನ್ಯಾಸಕ ಪ್ರೊ. ಪಿ.ಎಲ್. ಧರ್ಮ ಅವರು ಮಂಗಳವಾರ ಪ್ರಭಾರ ಕುಲಪತಿ ಪ್ರೊ. ಜಯರಾಜ್ ಅಮಿನ್ ಅವರಿಂದ ಅಧಿಕಾರ ವಹಿಸಿಕೊಂಡರು.

4 ವರ್ಷಗಳಿಂದ ಮಂಗಳೂರು ವಿ.ವಿ. ಕುಲಪತಿಯಾಗಿದ್ದ ಪ್ರೊ|ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಕಳೆದ ವರ್ಷ ಜೂ.2ರಂದು ಸೇವಾ ನಿವೃತ್ತಿ ಹೊಂದಿದ್ದರು. ಬಳಿಕ ಕುಲಪತಿ ಹುದ್ದೆ ಖಾಲಿ ಇತ್ತು. ಮಂಗಳೂರು ವಿ.ವಿ. ರಾಜ್ಯಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಹಾಗೂ ಕಲಾ ನಿಕಾಯದ ಡೀನ್‌ ಪ್ರೊ| ಜಯರಾಜ್‌ ಅಮೀನ್‌ ಅವರು ಜೂ.2ರಿಂದ “ಪ್ರಭಾರ ಕುಲಪತಿ’ಗಳಾಗಿ ಕರ್ತವ್ಯದಲ್ಲಿದ್ದರು.

ಅಧಿಕಾರ ಸ್ವೀಕರಿಸಿದ ದಿನದಿಂದ ನಾಲ್ಕು ವರ್ಷಗಳವರೆಗೆ ಅಥವಾ 67 ವರ್ಷ ಭರ್ತಿಯಾಗುವವರೆಗೆ, ಇವೆರಡಲ್ಲಿ ಯಾವುದು ಮೊದಲೋ ಆ ದಿನಾಂಕದವರೆಗೆ ಪ್ರೊ.ಪಿ.ಎಲ್.ಧರ್ಮ ಕುಲಪತಿಯಾಗಿ ಮುಂದುವರಿಯಲಿದ್ದಾರೆ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿರುವ ರಾಜ್ಯಪಾಲ ಥಾವರಚಂದ್‌ ಗೆಹ್ಲೋಠ್ ಮಂಗಳವಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು