11:46 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಪ್ರೊ.ಪಿ.ಎಲ್.ಧರ್ಮ ಮಂಗಳೂರು ವಿವಿಯ 10ನೇ ಕುಲಪತಿಯಾಗಿ ನೇಮಕ

05/03/2024, 22:40

 

ಮಂಗಳೂರು (Reporter Karnataka): ಮಂಗಳೂರು ವಿಶ್ವವಿದ್ಯಾನಿಲಯದ 10ನೇ ಕುಲಪತಿಯಾಗಿ ವಿವಿಯ ಮಾಜಿ ಕುಲಸಚಿವ (ಪರೀಕ್ಷಾಂಗ), ರಾಜ್ಯಶಾಸ್ತ್ರ ಉಪನ್ಯಾಸಕ ಪ್ರೊ. ಪಿ.ಎಲ್. ಧರ್ಮ ಅವರು ಮಂಗಳವಾರ ಪ್ರಭಾರ ಕುಲಪತಿ ಪ್ರೊ. ಜಯರಾಜ್ ಅಮಿನ್ ಅವರಿಂದ ಅಧಿಕಾರ ವಹಿಸಿಕೊಂಡರು.

4 ವರ್ಷಗಳಿಂದ ಮಂಗಳೂರು ವಿ.ವಿ. ಕುಲಪತಿಯಾಗಿದ್ದ ಪ್ರೊ|ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಕಳೆದ ವರ್ಷ ಜೂ.2ರಂದು ಸೇವಾ ನಿವೃತ್ತಿ ಹೊಂದಿದ್ದರು. ಬಳಿಕ ಕುಲಪತಿ ಹುದ್ದೆ ಖಾಲಿ ಇತ್ತು. ಮಂಗಳೂರು ವಿ.ವಿ. ರಾಜ್ಯಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಹಾಗೂ ಕಲಾ ನಿಕಾಯದ ಡೀನ್‌ ಪ್ರೊ| ಜಯರಾಜ್‌ ಅಮೀನ್‌ ಅವರು ಜೂ.2ರಿಂದ “ಪ್ರಭಾರ ಕುಲಪತಿ’ಗಳಾಗಿ ಕರ್ತವ್ಯದಲ್ಲಿದ್ದರು.

ಅಧಿಕಾರ ಸ್ವೀಕರಿಸಿದ ದಿನದಿಂದ ನಾಲ್ಕು ವರ್ಷಗಳವರೆಗೆ ಅಥವಾ 67 ವರ್ಷ ಭರ್ತಿಯಾಗುವವರೆಗೆ, ಇವೆರಡಲ್ಲಿ ಯಾವುದು ಮೊದಲೋ ಆ ದಿನಾಂಕದವರೆಗೆ ಪ್ರೊ.ಪಿ.ಎಲ್.ಧರ್ಮ ಕುಲಪತಿಯಾಗಿ ಮುಂದುವರಿಯಲಿದ್ದಾರೆ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿರುವ ರಾಜ್ಯಪಾಲ ಥಾವರಚಂದ್‌ ಗೆಹ್ಲೋಠ್ ಮಂಗಳವಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು