8:29 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಪ್ರೊ.ಪಿ.ಎಲ್.ಧರ್ಮ ಮಂಗಳೂರು ವಿವಿಯ 10ನೇ ಕುಲಪತಿಯಾಗಿ ನೇಮಕ

05/03/2024, 22:40

 

ಮಂಗಳೂರು (Reporter Karnataka): ಮಂಗಳೂರು ವಿಶ್ವವಿದ್ಯಾನಿಲಯದ 10ನೇ ಕುಲಪತಿಯಾಗಿ ವಿವಿಯ ಮಾಜಿ ಕುಲಸಚಿವ (ಪರೀಕ್ಷಾಂಗ), ರಾಜ್ಯಶಾಸ್ತ್ರ ಉಪನ್ಯಾಸಕ ಪ್ರೊ. ಪಿ.ಎಲ್. ಧರ್ಮ ಅವರು ಮಂಗಳವಾರ ಪ್ರಭಾರ ಕುಲಪತಿ ಪ್ರೊ. ಜಯರಾಜ್ ಅಮಿನ್ ಅವರಿಂದ ಅಧಿಕಾರ ವಹಿಸಿಕೊಂಡರು.

4 ವರ್ಷಗಳಿಂದ ಮಂಗಳೂರು ವಿ.ವಿ. ಕುಲಪತಿಯಾಗಿದ್ದ ಪ್ರೊ|ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಕಳೆದ ವರ್ಷ ಜೂ.2ರಂದು ಸೇವಾ ನಿವೃತ್ತಿ ಹೊಂದಿದ್ದರು. ಬಳಿಕ ಕುಲಪತಿ ಹುದ್ದೆ ಖಾಲಿ ಇತ್ತು. ಮಂಗಳೂರು ವಿ.ವಿ. ರಾಜ್ಯಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಹಾಗೂ ಕಲಾ ನಿಕಾಯದ ಡೀನ್‌ ಪ್ರೊ| ಜಯರಾಜ್‌ ಅಮೀನ್‌ ಅವರು ಜೂ.2ರಿಂದ “ಪ್ರಭಾರ ಕುಲಪತಿ’ಗಳಾಗಿ ಕರ್ತವ್ಯದಲ್ಲಿದ್ದರು.

ಅಧಿಕಾರ ಸ್ವೀಕರಿಸಿದ ದಿನದಿಂದ ನಾಲ್ಕು ವರ್ಷಗಳವರೆಗೆ ಅಥವಾ 67 ವರ್ಷ ಭರ್ತಿಯಾಗುವವರೆಗೆ, ಇವೆರಡಲ್ಲಿ ಯಾವುದು ಮೊದಲೋ ಆ ದಿನಾಂಕದವರೆಗೆ ಪ್ರೊ.ಪಿ.ಎಲ್.ಧರ್ಮ ಕುಲಪತಿಯಾಗಿ ಮುಂದುವರಿಯಲಿದ್ದಾರೆ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿರುವ ರಾಜ್ಯಪಾಲ ಥಾವರಚಂದ್‌ ಗೆಹ್ಲೋಠ್ ಮಂಗಳವಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು