8:12 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಆಸ್ತಿ ವಿವಾದ: ಭೀಕರವಾಗಿ ಕೊಲೆಗೀಡಾದ ಬೆಂಗಳೂರಿನ ರೌಡಿಶೀಟರ್ ಬಿಕ್ಲು ಶಿವ ಪ್ರಕರಣಕ್ಕೆ ಸ್ಫೋಟಕ ತಿರುವು

17/07/2025, 21:24

ಬೆಂಗಳೂರು(reporterkarnataka.com): ಆಸ್ತಿ ವಿವಾದ ಸಂಬಂಧಿಸಿದಂತೆ ಬರ್ಬರವಾಗಿ ಕೊಲೆಗೀಡಾದ ಬೆಂಗಳೂರಿನ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಪ್ರಕರಣ ಸ್ಫೋಟಕ ತಿರುವು ಪಡೆದಿದ್ದು, ನಾನು ಯಾರ ವಿರುದ್ಧವೂ ದೂರು ಕೊಟ್ಟಿಲ್ಲ ಎಂದು ಅವರ ತಾಯಿಯೇ ಹೇಳಿಕೆ ನೀಡಿದ್ದಾರೆ.
ಈ ಕೊಲೆ ಪ್ರಕರಣದಲ್ಲಿ ಕೆ.ಆರ್.ಪುರಂ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ ಅವರನ್ನು 5ನೇ ಆರೋಪಿಯನ್ನಾಗಿ ಹೆಸರಿಸಿ ಪೊಲೀಸರು ಎಫ್‍ಐಆರ್ ದಾಖಲಿಸಿದ್ದರು. ಬಿಕ್ಲು ಶಿವು ತಾಯಿ ನೀಡಿದ ದೂರಿನ ಮೇರೆಗೆ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಹೇಳಲಾಗಿತ್ತು.
ಆದರೆ ಇದೀಗ ಅವರ ತಾಯಿ ವಿಜಯಲಕ್ಷ್ಮೀ ಈ ಬಗ್ಗೆ ಸ್ಪಷ್ಟನೆ ನೀಡಿ, ನಾನು ಭೈರತಿ ಬಸವರಾಜ್ ಸೇರಿದಂತೆ ಯಾರ ವಿರುದ್ಧವೂ ದೂರು ಕೊಟ್ಟಿಲ್ಲ. ಪೊಲೀಸರು ಅವರ ವಿರುದ್ಧ ಏಕೆ ಎಫ್‍ಐಆರ್ ಹಾಕಿದ್ದಾರೆ? ಎಂದು ಪ್ರಶ್ನೆ ಮಾಡಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ ಮಗ ಕೊಲೆಯಾದ ದಿನ ಫೋನಲ್ಲಿ ಯಾರೊಂದಿಗೋ ಮಾತಾಡುತ್ತಿದ್ದವನು. ಹಾಗೆಯೇ ಹೊರಗೆ ಹೋದ. ಸ್ವಲ್ಪ ಹೊತ್ತಿನ ಬಳಿಕ ಜನ ಕೂಗಾಡೋದು ಕೇಳಿಸಿತು. ತಾನು ಹೋಗಿ ನೋಡಿದಾಗ ತನ್ನ ಮಗನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು ಗೊತ್ತಾಯಿತು ಎಂದು ಹೇಳಿದ್ದಾರೆ.
ನನ್ನ ಮಗನಿಗೆ ಕೆಲವರಿಂದ ಪ್ರಾಣಬೆದರಿಕೆ ಇತ್ತೆಂಬುದು ನಿಜ. ಆದರೆ ಈ ಪ್ರಕರಣಕ್ಕೂ, ಭೈರತಿ ಬಸವರಾಜ್ ಅವರಿಗೂ ಯಾವುದೇ ಸಂಬಂಧ ಇಲ್ಲ. ಪೊಲೀಸರೇ ಅವರ ಹೆಸರನ್ನು ಬರೆದುಕೊಂಡಿದ್ದಾರೆ. ನಾನು ಯಾರ ಮೇಲೂ ದೂರು ಕೊಟ್ಟಿಲ್ಲ ಎಂದ ಮೇಲೆ ಹೇಗೆ ಎಫ್‍ಐಆರ್ ದಾಖಲಿಸಲಾಗಿದೆ? ಎಂದು ಕೇಳಿದರು.
ನನ್ನ ಮಗ ಕೊಲೆಯಾದ ನಂತರ ನಾವು ಚಿಂತಾಕ್ರಾಂತರಾಗಿದ್ದೇವೆ. ಪತ್ನಿ ಹಾಗೂ ಮಕ್ಕಳ ಮುಂದಿನ ಭವಿಷ್ಯವೇನು ಎಂದು ಚಿಂತೆ ಮಾಡುತ್ತಿದ್ದೇವೆ. ಅಂತ್ಯಸಂಸ್ಕಾರ ಹೇಗೆ ನಡೆಸಬೇಕು ಎಂಬುದು ನಮಗೆ ತಿಳಿದಿರಲಿಲ್ಲ. ನಮ್ಮ ಕುಟುಂಬಕ್ಕೆ ಆಸರೆಯಾದ ಮಗ ಹೋದನೆಂಬ ಚಿಂತನೆ ಇರುವಾಗ ಬೇರೆಯವರ ವಿರುದ್ಧ ದೂರು ಕೊಡುವ ಅಗತ್ಯವಿಲ್ಲ ಎಂದು ತಾಯಿ ಸ್ಪಷ್ಟಪಡಿಸಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಬಸವರಾಜ್ ಮಾತನಾಡಿ, ರೌಡಿಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ. ರಾಜಕೀಯ ಷಡ್ಯಂತ್ರದಿಂದ ಈ ರೀತಿ ಏಕೆ ನಡೆದಿದೆ ಎಂಬುದು ತಮಗೂ ಆಶ್ಚರ್ಯವುಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು.
ನನಗೂ ಬಿಕ್ಲು ಶಿವ ಕೊಲೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ, ಕೊಲೆಯಾದವನ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ದೂರು ಕೊಟ್ಟ ತಕ್ಷಣ ಏಕಾಏಕಿ ನನ್ನ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಈ ಪ್ರಕರಣದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಯಾರೇ ದೂರು ಕೊಟ್ಟರೂ ಎಫ್ ಐಆರ್ ದಾಖಲಿಸಬಹುದಾ? ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದರು.
ಈ ರೀತಿ ಒಬ್ಬರ ತೇಜೋವಧೆ ಮಾಡುವಂಥದ್ದು ಬಹಳ ನೋವಾಗುತ್ತದೆ. ನನ್ನ ಕುರಿತು ಈ ರೀತಿ ಅಪಪ್ರಚಾರ ಮಾಡುತ್ತಿರುವುದು ತುಂಬಾ ಬೇಸರ ತರಿಸಿದೆ. ಕ್ಷೇತ್ರದ ಕೆಲಸ ಜನರ ಕೆಲಸ ಬಿಟ್ಟರೆ ಬೇರೆ ಯಾವುದೇ ವ್ಯವಹಾರ ನನಗೆ ಗೊತ್ತಿಲ್ಲ. ಈ ವಿಚಾರಕ್ಕೂ ನನಗೂ ಸಂಬಂಧ ಇಲ್ಲ. ಯಾವುದೇ ಮಾಹಿತಿ ನನ್ನನ್ನು ಕೇಳದೆ ನನ್ನ ಮೇಲೆ ಪೊಲೀಸರು ಎಫ್‍ಐಆರ್ ದಾಖಲೆ ಮಾಡುತ್ತಾರೆ. ಯಾರೋ ದೂರು ಕೊಟ್ಟ ತಕ್ಷಣ ನನ್ನ ಮೇಲೆ ಪೊಲೀಸರು ಕೇಸ್ ದಾಖಲಿಸುತ್ತಾರಾ? ನನ್ನ ವಿರುದ್ಧ ಯಾರು ಷಡ್ಯಂತ್ರ ಮಾಡಿದ್ದಾರೋ ಅವರ ವಿರುದ್ಧವಾಗಿ ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಬಿಕ್ಲು ಶಿವು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ನಗರದ ಭಾರತಿನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು