5:46 PM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

16/12/2025, 14:44

ಬೆಳಗಾವಿ ಸುವರ್ಣಸೌಧ (reporterkarnataka.com): ಗೃಹ ಇಲಾಖೆಯಿಂದ 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಿವಮೊಗ್ಗ ಶಾಸಕ ಚನ್ನಬಸಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.
ಈ ಹಿಂದಿನ ಸರ್ಕಾರದಲ್ಲಿ 545 ಪಿ.ಎಸ್.ಐ ನೇಮಕಾತಿ ವಿಚಾರದಲ್ಲಿ ಗೊಂದಲ ಉಂಟಾಗಿ ನೇಮಕಾತಿ ಪ್ರಕ್ರಿಯೆ ಸ್ಥಗಿತವಾಗಿತ್ತು. ಸದ್ಯ ಸರ್ಕಾರ 947 ಪಿ.ಎಸ್.ಐ ಹುದ್ದೆಗಳನ್ನು ಭರ್ತಿ ಮಾಡಿದೆ. ಆಯ್ಕೆಗೊಂಡ ಅಭ್ಯರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ. ತರಬೇತಿ ಪೂರ್ಣಗೊಂಡ ನಂತರ ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ 42 ಪಿ.ಎಸ್.ಐ ಹುದ್ದೆಗಳ ಪೈಕಿ 32 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುವುದು. ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 33 ಪೊಲೀಸ್ ಠಾಣೆಗಳಿದ್ದು, 1549 ಹುದ್ದೆಗಳಲ್ಲಿ 1394 ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. 155 ಹುದ್ದೆಗಳು ಖಾಲಿಯಿವೆ. ಪೊಲೀಸ್ ಠಾಣೆಗಳ ದಿನನಿತ್ಯದ ಕರ್ತವ್ಯಕ್ಕೆ ತೊಂದರೆಯಾಗದಂತೆ 103 ಗೃಹ ರಕ್ಷಕ ಸಿಬ್ಬಂದಿ ನೇಮಿಸಿಕೊಂಡು ಕರ್ತವ್ಯ ಭಾರವನ್ನು ಸರಿದೂಗಿಸಲಾಗಿದೆ ಎಂದರು.
ಮುಂಬರುವ ದಿನಗಳಲ್ಲಿ ಮಾನದಂಡಗಳನ್ನು ಆಧರಿಸಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಪೊಲೀಸ್ ಕಮಿಷನರೇಟ್ ಸ್ಥಾಪಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಕಾನೂನು ಸುವ್ಯವಸ್ಥೆ ಹದಗೆಡದಂತೆ ಕಾಪಾಡಲು ಸ್ಪೆಷಲ್ ಆಕ್ಷನ್ ಪೋರ್ಸ್ ಶಿವಮೊಗ್ಗದಲ್ಲಿ ನಿಯೋಜಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ಇದೇ ವೇಳೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸಿಗಂಧೂರು ಉಪ ಪೊಲೀಸ್ ಠಾಣೆಯನ್ನು, ಪೊಲೀಸ್ ಠಾಣೆಯನ್ನಾಗಿ ಮೇಲ್ದರ್ಜೆಗೆ ಏರಿಸುವ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು