ಇತ್ತೀಚಿನ ಸುದ್ದಿ
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ
19/03/2026, 12:39
ಮಡಿಕೇರಿ(reporterkarnataka.com): ಕುಶಾಲನಗರದ ಮನೆಯೊಂದರಲ್ಲಿ ವೇಶ್ಯವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಮಹಿಳೆ ಸೇರಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಇಬ್ಬರು ಸಂತ್ರಸ್ತೆರನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಬಿಡಲಾಗಿದೆ.
ಇಲ್ಲಿನ ಮುಳ್ಳುಸೋಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮನೆಯೊಂದರಲ್ಲಿ ನಡೆಯುತ್ತಿದ್ದ ದಂಧೆ ಬಗ್ಗೆ ಮಾಹಿತಿ ಇದ್ದು, ದೂರು ಬಂದ ಹಿನ್ನಲೆಯಲ್ಲಿ ದಾಳಿ ನಡೆಸಿದ್ದು ಮೈಸೂರು ಮತ್ತು ಸೋಮವಾರಪೇಟೆಯ ಇಬ್ಬರು ಯುವತಿಯರನ್ನು ರಕ್ಷಿಸಲಾಗಿದ್ದು ಮತ್ತಿಬ್ಬರನ್ನು ಬಂಧಿಸಲಾಗಿದೆ, ದಾಳಿ ವೇಳೆ ಕೆಲವರು ಸ್ಥಳದಿಂದ ಪರಾರಿಯಾಗಿದ್ದು, ಅವರುಗಳ ಪತ್ತೆ ಕಾರ್ಯ ನಡೆಸಲಾಗುತ್ತಿದೆ.












