9:13 AM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಪಾಲಿಕೆ ಖಾಯಂ ನೌಕರರ ಪ್ರತಿಭಟನೆ: ಶಾಸಕ ವೇದವ್ಯಾಸ ಕಾಮತ್ ಭೇಟಿ; ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಜತೆ ಮಾತುಕತೆ

11/07/2025, 12:59

ಮಂಗಳೂರು(reporterkarnataka.com): ವಿವಿಧ ಬೇಡಿಕೆಗಳ ಆಗ್ರಹಿಸಿ ಮಂಗಳೂರಿನ ಎಸ್.ಕೆ. ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ ನೇತೃತ್ವದಲ್ಲಿ, ಮಂಗಳೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಗುರುವಾರ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಭೇಟಿ ನೀಡಿ ಮಾತುಕತೆ ನಡೆಸಿದರು.
ಪ್ರತಿಭಟನಾಕಾರರ ಬೇಡಿಕೆ ಹಾಗೂ ಸಮಸ್ಯೆಗಳನ್ನು ಆಲಿಸಿದ ಶಾಸಕರು, ಸ್ಥಳದಲ್ಲಿಯೇ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಾದ ದೀಪಾ ಚೋಳನ್ ಅವರಿಗೆ ಕರೆಮಾಡಿ, ಇಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ ಮಂಗಳೂರು ಜನತೆಗೆ ತೀವ್ರ ತೊಂದರೆಯಾಗುತ್ತಿದೆ. ಅವರ ನ್ಯಾಯಯುತ ಬೇಡಿಕೆಗಳನ್ನು ಕಡೆಗಣಿಸುವ ಬದಲು ಬಗೆಹರಿಸುವ ನಿಟ್ಟಿನಲ್ಲಿ ಕೂಡಲೇ ಸಭೆ ಕರೆಯಿರಿ ಎಂದು ಮನವಿ ಮಾಡಿದರು. ಶಾಸಕರ ಸಲಹೆಯ ಮೇರೆಗೆ ಕಾರ್ಯದರ್ಶಿಗಳು ಬೆಂಗಳೂರಿನಲ್ಲಿಯೂ ಪ್ರತಿಭಟನೆ ನಡೆಯುತ್ತಿದ್ದು ಇಲ್ಲಿನ ಪ್ರಮುಖರೊಂದಿಗೆ ಶುಕ್ರವಾರ ಮಧ್ಯಾಹ್ನವೇ ಸಭೆ ನಡೆಸುತ್ತೇವೆಂದು ತಿಳಿಸಿದರು.

ಶಾಸಕರು ಅದನ್ನು ಪ್ರತಿಭಟನಾಕಾರರಿಗೆ ಮನವರಿಕೆ ಮಾಡಿ, ಪ್ರತಿಭಟನೆ ನಿಮ್ಮ ಸಂವಿಧಾನಬದ್ಧ ಹಕ್ಕು, ಅದಕ್ಕೆ ಅಭ್ಯಂತರವಿಲ್ಲ. ಆದರೆ ನಗರದಲ್ಲಿ ಕಸ ವಿಲೇವಾರಿ ಸೇರಿದಂತೆ ಅನೇಕ ಕೆಲಸಗಳು ಸ್ಥಗಿತಗೊಂಡ ಪರಿಣಾಮ ಸಮಸ್ಯೆಯಾಗಿದೆ. ಮಂಗಳೂರಿನ ಜನತೆಗೆ ನಿಮ್ಮ ಸೇವೆ ಅತ್ಯಂತ ಅಗತ್ಯವಾಗಿದ್ದು ಯಾರಿಗೂ ತೊಂದರೆಯಾಗದಂತೆ ದಯವಿಟ್ಟು ಸಹಕರಿಸಿ. ನಿಮ್ಮ ಎಲ್ಲಾ ಕಷ್ಟಗಳನ್ನು ಖಂಡಿತವಾಗಿಯೂ ಮುಂಬರುವ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತೇನೆ. ಗ್ಯಾರಂಟಿಯಿಂದಾಗಿ ಈಗಾಗಲೇ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿದೆ ಎಂದು ಸ್ವತಃ ಆಡಳಿತ ಪಕ್ಷದವರೇ ಹೇಳುತ್ತಿದ್ದಾರೆ. ಹಾಗಿರುವಾಗ ನಿಮ್ಮ ಬೇಡಿಕೆಗಳನ್ನು ಈಡೇರಿಸುತ್ತಾರೋ, ಇಲ್ಲವೋ ಗೊತ್ತಿಲ್ಲ. ಆದರೂ ನಾನಂತೂ ನಿಮ್ಮ ಪರವಾಗಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು