12:07 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

Protest in Delhi | ‘ಉದ್ಯೋಗ ಕೊಡಿ ಅಥವಾ ಅಧಿಕಾರ ತ್ಯಜಿಸಿ’: ಕೇಂದ್ರ ವಿರುದ್ಧ ದೆಹಲಿಯಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ

27/03/2025, 18:07

ನವದೆಹಲಿ(reporterkarnataka.com): ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಬ್ ಜಿ ಅವರ ನೇತೃತ್ವದಲ್ಲಿ, ದೆಹಲಿಯಲ್ಲಿ ಇಂದು ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಉದ್ಯೋಗ ಕೊಡಿ ಅಥವಾ ಅಧಿಕಾರ ತ್ಯಜಿಸಿ ಎಂಬ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿತ್ತು. ದೆಹಲಿಯ ಬೀದಿಗಳಲ್ಲಿ ಕನ್ನಡದ ಕಹಳೆಯನ್ನು ಮೊಳಗಿಸಿದ ಹಾಗೂ ಕನ್ನಡ ಬಾವುಟಗಳು ಹಿಡಿದು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ ರವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಉದ್ಯೋಗ ಕೊಡಿ, ನಿಮ್ಮ ವ್ಯರ್ಥ ಭಾಷಣಗಳು ಬೇಡ ಇಲ್ಲವಾದರೆ ಸಂಸತ್ತಿಗೆ ಮುತ್ತಿಗೆ ಹಾಕುತ್ತೇವೆಂದು ಯುವ ಕಾಂಗ್ರೆಸ್ ನ ಕಾರ್ಯಕರ್ತರು ಪ್ರತಿಧ್ವನಿ ಮೊಳಗಿಸಿದರು.


ಕೇಂದ್ರದಲ್ಲಿ ಕುಳಿತಿರುವ ಯುವ ವಿರೋಧಿ ಮೋದಿ ಸರ್ಕಾರದ ವಿರುದ್ಧ ನ್ಯಾಯಕ್ಕಾಗಿ ಈ ಹೋರಾಟ ನ್ಯಾಯ ಸಿಗುವವರೆಗೂ ಮುಂದುವರಿಯಲಿದೆ ಎಂದು ಉಡುಪಿ ಜಿಲ್ಲೆಯಿಂದ ಪ್ರತಿಭಟನೆಗೆ ತೆರಳಿದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರಯ್ಯ ಅಂಜನ್ ಬ್ಯಾರಿಗೇಟ್ ಹತ್ತಿ ಪ್ರತಿಭಟಿಸಿ ಗಮನ ಸೆಳೆದರು.

ಇತ್ತೀಚಿನ ಸುದ್ದಿ

ಜಾಹೀರಾತು