10:16 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

Protest | ಯಾದಗಿರಿ: ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ನೀರು ಆಗ್ರಹಿಸಿ ಬೃಹತ್ ಟ್ರಾಕ್ಟರ್ ಪ್ರತಿಭಟನೆ

26/03/2025, 20:05

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ಏ.10 ರವರೆಗೆ ನಿರಂತರವಾಗಿ ನೀರು ಹರಿಸಬೇಕು ಎಂದು ಆಗ್ರಹಿಸಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ನರಸಿಂಹ ನಾಯಕ (ರಾಜುಗೌಡ್ರು) ನೇತೃತ್ವದಲ್ಲಿ ಬೃಹತ್ ಟ್ಯಾಕ್ಟರ್ ಪ್ರತಿಭಟನೆ ನಡೆಸಲಾಯಿತು.


ಹುಣಸಗಿ ಪಟ್ಟಣದಿಂದ ನಾರಾಯಣಪುರ ಮುಖ್ಯ ಇಂಜಿನಿಯರ್ ಆಫೀಸ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ರಾಜ್ಯ ಸರಕಾರದ ರೈತ ವಿರೋಧಿ ನೀತಿಗಳ ಬಗ್ಗೆ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಬೇಕೆ ಬೇಕು ಏ.10 ರವರೆಗೆ ಕಾಲುವೆಗೆ ನೀರು ಬೇಕು ಎಂಬ ಘೋಷಣೆ ಮೊಳಗಿತು. ಬಳಿಕ ಪ್ರತಿಭಟನೆಯಲ್ಲಿ ರೈತ ಮುಖಂಡರು ಮಾತನಾಡಿ, ನಾರಾಯಣಪುರ ಎಡದಂಡೆ ಕಾಲುವೆಯ ಅವಲಂಬನೆಯ ರೈತರಿಗೆ ಅನ್ಯಾಯ ಮಾಡಬೇಡಿ ನಿಮ್ಮನ ನಂಬಿ ರೈತರರು ಶೇಂಗಾ, ಸಜ್ಜೆ, ಸೂರ್ಯಕಾಂತಿ, ಭತ್ತ ಸೇರಿ ಇನ್ನಿತರ ಬೆಳೆಗಳು ಇನ್ನೂ 20ರಿಂದ 25 ದಿನಗಳಲ್ಲಿ ಕೈಗೆ ಬರುತ್ತವೆ. ಆದರೆ ತೆನೆ ಬರುವ ಸಂದರ್ಭದಲ್ಲಿ ಏಕಾಏಕಿ ಕಾಲುವೆ ನೀರು ನಿಂತು ಹೋದರೆ ರೈತರ ಲಕ್ಷಾಂತರ ಮೊತ್ತದ ಬೆಳೆ ನಷ್ಟವಾಗಿ ಅವರ ಬಾಳು ಕೂಡ ಹಾಳಾಗುತ್ತದೆ ಎಂದು ಹೇಳಿದರು.
ಕೃಷಿ ಇಲಾಖೆಯು ಬೆಳೆಗಳ ವಾಸ್ತವ ಸ್ಥಿತಿಯನ್ನು ಸರಕಾರಕ್ಕೆ ವರದಿ ಮಾಡಿದೆ. ನೀರಾವರಿ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳ ಸಂಗ್ರಹವಿದ್ದ ಅದೇಷ್ಟೋ ಟಿಎಂಸಿ ನೀರು ನದಿಗೆ ಹೋಗಿದೆ ಎಂದು ಆಕ್ರೋಶ ಹೊರ ಹಾಕಿದರು. ನೀರಾವರಿ ಸಲಹಾ ಸಮಿತಿಯವರ ಅವೈಜ್ಞಾನಿಕ ತಿರ್ಮಾನ, ತೆಲಂಗಾಣ ರಾಜ್ಯಕ್ಕೆ ರಾತೋರಾತ್ರಿ ನೀರು ಹರಿಸಿರುವುದು ಸರಿಯಾದ ಕ್ರಮವಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ನರಸಿಂಹ ನಾಯಕ (ರಾಜುಗೌಡ್ರು) ಹರಿ ಹಾಯ್ದರು.
ಏ.10 ರವರೆಗೆ ಕಾಲುವೆಗೆ ನೀರು ಹರಿಸದಿದ್ದರೆ ರೈತರು ಬೆಳೆ ನಷ್ಟ ಅನುಭವಿಸಿ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಸರಕಾರವೇ ಜವಾಬ್ದಾರಿಯಾಗುತ್ತದೆ ಮತ್ತು ಸರಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಕಾರಣ ಸರಕಾರ ರೈತರ ಹಿತ ಕಾಪಾಡಬೇಕಾಗಿರುವುದು ಅಗತ್ಯವಾಗಿದೆ.
ಈಗ ರೈತರಿಗೆ ಬಂದಿರುವ ಸಂಕಷ್ಟ ನಿವಾರಿಸಬೇಕು. ಕುಡಿಯಲು ಅವಶ್ಯವಿರುವ 24 ಟಿಎಂಸಿ ನೀರು ಇದೆ. ಹಾಗಾಗಿ ಏ.10 ವರೆಗೆ ಕಾಲುವೆಗೆ ನೀರು ಹರಿಸಿ ರೈತರ ಬೆಳೆ, ಬಾಳು ಉಳಿಸಬೇಕು ಎಂದು ತಿಳಿಸಿದರು.
ಇದೆ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ನರಸಿಂಹ ನಾಯಕ (ರಾಜುಗೌಡ್ರು) , ಬಬ್ಲುಗೌಡ , ಅಮಿನ ರೆಡ್ಡಿ ಯಾಳಗಿ, ಬಸನಗೌಡ , ಹನಮಂತ ನಾಯಕ್ ತಾತಾ, ಹೆಚ್ ಸಿ ಪಾಟೀಲ್, ಯಲ್ಲಪ್ಪ ಕುರಕುಂಡಿ, ಶೇಖರ್ ಎಸ್ ನಾಯಕ, ತಿರುಪತಿ ಹೆಚ್ ನಾಯಕ, ಸಂಗಣ್ಣ ವೈಲಿ, ವೆಂಕಟೇಶ ಸಾಹುಕಾರ್, ಶಿವಣ್ಣ ಮಂಗಿಹಾಳ್, ರಮೇಶ ಕೋಲೂರು, ಶಿವು ಬಿರಾದಾರ, ಅನೇಕ ಸಂಘಟನೆಪರ ಹೋರಾಟಗಾರರು , ರೈತರ ಪರ ಹೊರಟಗಾರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು