11:09 PM Saturday29 - March 2025
ಬ್ರೇಕಿಂಗ್ ನ್ಯೂಸ್
Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ… MSIL | ಸರಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಇ ಪೋರ್ಟಲ್‌ Chikkamagaluru | ಬಾಲ ಹಿಡಿದು ಎತ್ತಿದ ಉರಗ ತಜ್ಞರು: ನುಂಗಿದ್ದ 10 ಮೊಟ್ಟೆಗಳನ್ನು… Speaker Talking | ವಿಧಾನ ಸೌಧಕ್ಕೆ ವರ್ಣರಂಜಿತ ದೀಪಾಲಂಕಾರ; ಯಾವಾಗ ಉದ್ಘಾಟನೆ?; ಸ್ಪೀಕರ್… ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ: ಹಾಲು ದರ ಏರಿಕೆಗೆ ಕೇಂದ್ರ… ಕೋಲಾರ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಎಕರೆ ಅರಣ್ಯ ಭೂಮಿ ಒತ್ತುವರಿ; ತೇರಹಳ್ಳಿ… Protest in Delhi | ‘ಉದ್ಯೋಗ ಕೊಡಿ ಅಥವಾ ಅಧಿಕಾರ ತ್ಯಜಿಸಿ’: ಕೇಂದ್ರ… Medical College | ಗದಗ ಮೆಡಿಕಲ್ ಕಾಲೇಜಿಗೆ ಕೆ.ಎಚ್. ಪಾಟೀಲ್ ಹೆಸರು: ರಾಜ್ಯ… BJP Internal War | ಯಡಿಯೂರಪ್ಪ ಕುಟುಂಬದ ಕಟು ಟೀಕೆಕಾರ ಯತ್ನಾಳ್ ಗೆ… Protest | ಯಾದಗಿರಿ: ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ನೀರು ಆಗ್ರಹಿಸಿ ಬೃಹತ್…

ಇತ್ತೀಚಿನ ಸುದ್ದಿ

Protest | ಯಾದಗಿರಿ: ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ನೀರು ಆಗ್ರಹಿಸಿ ಬೃಹತ್ ಟ್ರಾಕ್ಟರ್ ಪ್ರತಿಭಟನೆ

26/03/2025, 20:05

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ಏ.10 ರವರೆಗೆ ನಿರಂತರವಾಗಿ ನೀರು ಹರಿಸಬೇಕು ಎಂದು ಆಗ್ರಹಿಸಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ನರಸಿಂಹ ನಾಯಕ (ರಾಜುಗೌಡ್ರು) ನೇತೃತ್ವದಲ್ಲಿ ಬೃಹತ್ ಟ್ಯಾಕ್ಟರ್ ಪ್ರತಿಭಟನೆ ನಡೆಸಲಾಯಿತು.


ಹುಣಸಗಿ ಪಟ್ಟಣದಿಂದ ನಾರಾಯಣಪುರ ಮುಖ್ಯ ಇಂಜಿನಿಯರ್ ಆಫೀಸ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ರಾಜ್ಯ ಸರಕಾರದ ರೈತ ವಿರೋಧಿ ನೀತಿಗಳ ಬಗ್ಗೆ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಬೇಕೆ ಬೇಕು ಏ.10 ರವರೆಗೆ ಕಾಲುವೆಗೆ ನೀರು ಬೇಕು ಎಂಬ ಘೋಷಣೆ ಮೊಳಗಿತು. ಬಳಿಕ ಪ್ರತಿಭಟನೆಯಲ್ಲಿ ರೈತ ಮುಖಂಡರು ಮಾತನಾಡಿ, ನಾರಾಯಣಪುರ ಎಡದಂಡೆ ಕಾಲುವೆಯ ಅವಲಂಬನೆಯ ರೈತರಿಗೆ ಅನ್ಯಾಯ ಮಾಡಬೇಡಿ ನಿಮ್ಮನ ನಂಬಿ ರೈತರರು ಶೇಂಗಾ, ಸಜ್ಜೆ, ಸೂರ್ಯಕಾಂತಿ, ಭತ್ತ ಸೇರಿ ಇನ್ನಿತರ ಬೆಳೆಗಳು ಇನ್ನೂ 20ರಿಂದ 25 ದಿನಗಳಲ್ಲಿ ಕೈಗೆ ಬರುತ್ತವೆ. ಆದರೆ ತೆನೆ ಬರುವ ಸಂದರ್ಭದಲ್ಲಿ ಏಕಾಏಕಿ ಕಾಲುವೆ ನೀರು ನಿಂತು ಹೋದರೆ ರೈತರ ಲಕ್ಷಾಂತರ ಮೊತ್ತದ ಬೆಳೆ ನಷ್ಟವಾಗಿ ಅವರ ಬಾಳು ಕೂಡ ಹಾಳಾಗುತ್ತದೆ ಎಂದು ಹೇಳಿದರು.
ಕೃಷಿ ಇಲಾಖೆಯು ಬೆಳೆಗಳ ವಾಸ್ತವ ಸ್ಥಿತಿಯನ್ನು ಸರಕಾರಕ್ಕೆ ವರದಿ ಮಾಡಿದೆ. ನೀರಾವರಿ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳ ಸಂಗ್ರಹವಿದ್ದ ಅದೇಷ್ಟೋ ಟಿಎಂಸಿ ನೀರು ನದಿಗೆ ಹೋಗಿದೆ ಎಂದು ಆಕ್ರೋಶ ಹೊರ ಹಾಕಿದರು. ನೀರಾವರಿ ಸಲಹಾ ಸಮಿತಿಯವರ ಅವೈಜ್ಞಾನಿಕ ತಿರ್ಮಾನ, ತೆಲಂಗಾಣ ರಾಜ್ಯಕ್ಕೆ ರಾತೋರಾತ್ರಿ ನೀರು ಹರಿಸಿರುವುದು ಸರಿಯಾದ ಕ್ರಮವಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ನರಸಿಂಹ ನಾಯಕ (ರಾಜುಗೌಡ್ರು) ಹರಿ ಹಾಯ್ದರು.
ಏ.10 ರವರೆಗೆ ಕಾಲುವೆಗೆ ನೀರು ಹರಿಸದಿದ್ದರೆ ರೈತರು ಬೆಳೆ ನಷ್ಟ ಅನುಭವಿಸಿ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಸರಕಾರವೇ ಜವಾಬ್ದಾರಿಯಾಗುತ್ತದೆ ಮತ್ತು ಸರಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಕಾರಣ ಸರಕಾರ ರೈತರ ಹಿತ ಕಾಪಾಡಬೇಕಾಗಿರುವುದು ಅಗತ್ಯವಾಗಿದೆ.
ಈಗ ರೈತರಿಗೆ ಬಂದಿರುವ ಸಂಕಷ್ಟ ನಿವಾರಿಸಬೇಕು. ಕುಡಿಯಲು ಅವಶ್ಯವಿರುವ 24 ಟಿಎಂಸಿ ನೀರು ಇದೆ. ಹಾಗಾಗಿ ಏ.10 ವರೆಗೆ ಕಾಲುವೆಗೆ ನೀರು ಹರಿಸಿ ರೈತರ ಬೆಳೆ, ಬಾಳು ಉಳಿಸಬೇಕು ಎಂದು ತಿಳಿಸಿದರು.
ಇದೆ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ನರಸಿಂಹ ನಾಯಕ (ರಾಜುಗೌಡ್ರು) , ಬಬ್ಲುಗೌಡ , ಅಮಿನ ರೆಡ್ಡಿ ಯಾಳಗಿ, ಬಸನಗೌಡ , ಹನಮಂತ ನಾಯಕ್ ತಾತಾ, ಹೆಚ್ ಸಿ ಪಾಟೀಲ್, ಯಲ್ಲಪ್ಪ ಕುರಕುಂಡಿ, ಶೇಖರ್ ಎಸ್ ನಾಯಕ, ತಿರುಪತಿ ಹೆಚ್ ನಾಯಕ, ಸಂಗಣ್ಣ ವೈಲಿ, ವೆಂಕಟೇಶ ಸಾಹುಕಾರ್, ಶಿವಣ್ಣ ಮಂಗಿಹಾಳ್, ರಮೇಶ ಕೋಲೂರು, ಶಿವು ಬಿರಾದಾರ, ಅನೇಕ ಸಂಘಟನೆಪರ ಹೋರಾಟಗಾರರು , ರೈತರ ಪರ ಹೊರಟಗಾರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು