8:28 AM Tuesday13 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ

06/12/2024, 23:50

ಮಂಗಳೂರು(reporterkarnata.com):- 2024-25ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಉಪಯೋಜನೆಯಡಿಯಲ್ಲಿ ಅಂತಾರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕರ್ನಾಟಕದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಕ್ರೀಡಾಪಟುಗಳು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದವರಾಗಿರಬೇಕು. ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಲಗತ್ತಿಸಬೇಕು. ಪ್ರೋತ್ಸಾಹಧನವನ್ನು ಕರ್ನಾಟಕದ ಕ್ರೀಡಾಪಟುಗಳಿಗೆ ಮಾತ್ರ ನೀಡಲಾಗುತ್ತದೆ. ಕ್ರೀಡಾಪಟುಗಳು ಕರ್ನಾಟಕ ಮೂಲದವರಾಗಿದ್ದು, ಬೇರೆ ರಾಜ್ಯ ಅಥವಾ ಕ್ರೀಡಾತಂಡವನ್ನುವಪ್ರತಿನಿಧಿಸುವ ಕ್ರೀಡಾಪಟುಗಳು ಈ ಪುರಸ್ಕಾರಕ್ಕೆ ಅರ್ಹರಾಗಿರುವುದಿಲ್ಲ. 6ನೇ ತರಗತಿಯಿಂದ ವ್ಯಾಸಂಗಮಾಡುತ್ತಿರುವ ಕ್ರೀಡಾಪಟುಗಳು ಹಾಗೂ ಸರ್ಕಾರಿ/ಅರೆ ಸರ್ಕಾರಿ ಇಲಾಖೆಗಳಲ್ಲಿ ನೇಮಕಗೊಂಡು ಸೇವೆ ಸಲ್ಲಿಸುತ್ತಿರುವವರು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದವರು ಮಾತ್ರ ಅರ್ಜಿ ಸಲ್ಲಿಸ ಬಹುದು.
ಕ್ರೀಡಾಪಟುಗಳು ಆಧಾರ್ ಕಾರ್ಡ್, ಪಡಿತರ ಚೀಟಿ ಹಾಗೂ ಆರ್.ಡಿ. ಸಂಖ್ಯೆಯನ್ನು ಒಳಗೊಂಡ ಜಾತಿ/ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ಒಲಂಪಿಕ್/ಏಷ್ಯನ್/ಕಾಮನ್ ವೆಲ್ತ್ ಕ್ರೀಡೆಗಳಲ್ಲಿ ಅಂತರಾಷ್ಟ್ರೀಯ ಸಂಸ್ಥೆ ಮತ್ತು ಯುವ ವ್ಯವಹಾರ ಮತ್ತು ಕ್ರೀಡಾ ಮಂತ್ರಾಲಯದಿಂದ ಮಾನ್ಯತೆ ಪಡೆದ ಕ್ರೀಡಾ ಸಂಸ್ಥೆಗಳು ನಡೆಸುವ ಅಧಿಕೃತ ಚಾಂಪಿಯನ್ ಶಿಪ್ ಗಳಿಗೆ ಮಾತ್ರ ಪೆÇ್ರೀತ್ಸಾಹಧನ ನೀಡಲಾಗುವುದು. ರಾಜ್ಯ ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಪ್ರೋತ್ಸಾಹ
ಧನಕ್ಕೆ ಅರ್ಹರಾಗಿರುವುದಿಲ್ಲ.
ಬ್ಯಾಂಕ್ ಖಾತೆ ಕಡ್ಡಾಯವಾಗಿ ಕ್ರೀಡಾಪಟುವಿನ ಹೆಸರಿನಲ್ಲಿದ್ದು, ಪಾಸ್ ಪುಸ್ತಕದ ಮುಖಪುಟ ಪ್ರತಿಯನ್ನು (ಹೆಸರು. ಖಾತೆ ಸಂಖ್ಯೆ, IಈSಅ) ಲಗತ್ತಿಸಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 19 ಕೊನೆಯ ದಿನ.
ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು ಇವರ ಕಚೇರಿಯಲ್ಲಿ ಮಂಗಳಾ ಕ್ರೀಡಾಂಗಣ ಕಚೇರಿಗೆ ಸಲ್ಲಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು