7:03 PM Tuesday5 - August 2025
ಬ್ರೇಕಿಂಗ್ ನ್ಯೂಸ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:…

ಇತ್ತೀಚಿನ ಸುದ್ದಿ

ಪ್ರವಾಹದ ನಡುವೆ ಸೇತುವೆಯಲ್ಲಿ ಸಿಕ್ಕಿಹಾಕಿಕೊಂಡ ಮಹಿಳೆ: ಮಾನವೀಯತೆ ಮೆರೆದ ಅಥಣಿ ಪೊಲೀಸರು 

25/07/2021, 12:34

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಖಾಕಿ ಅಂದ್ರೆ ಸಾಮಾನ್ಯವಾಗಿ ಎಲ್ಲರಿಗೂ ಭಯ. ಅಪನಂಬಿಕೆ. ಆದ್ರೆ ಅಂತಹ ಖಾಕಿ ತೊಟ್ಟ ಪೊಲೀಸರು ಕೂಡ ಮಾನವೀಯತೆ ಮೆರೆದ, ತಾಯಿ ಹೃದಯ ಪ್ರದರ್ಶಿಸಿದ ಹಲವು ಘಟನೆಗಳಿವೆ. ಅಂಥದೊಂದು ನೈಜ ಘಟನೆಗೆ ಇಂದು ಅಥಣಿ ಸಾಕ್ಷಿಯಾಯಿತು.

ಅಥಣಿ ತಾಲೂಕಿನ ಹಲ್ಯಾಳ ಹಾಗೂ ದರೂರು ಮಧ್ಯೆ ಇರುವ ಕೃಷ್ಣಾ ನದಿ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಎತ್ತ ಕಣ್ಣು ಹಾಯಿಸಿದರೂ ಕೆಂಪು ಜಲರಾಶಿ. ಎಂಥಹ ಧೈರ್ಯವಂತನ ಎದೆಯಲ್ಲಿ ತಲ್ಲಣ ಉಂಟು ಮಾಡುವ ಸನ್ನಿವೇಶ. ಇಂತಹ ಭೀಕರ ಸನ್ನಿವೇಶದಲ್ಲಿ ಸೇತುವೆ ಮೇಲೆ ಸಿಕ್ಕಿಹಾಕಿಕೊಂಡ ಒಂಟಿ ಮಹಿಳೆಯೊಬ್ಬರನ್ನು ಅಥಣಿ ಪೊಲೀಸರು ಬಚಾವ್ ಮಾಡಿದ್ದಾರೆ.

ವಿಠ್ಠಲ್ ಹುಲಿಕಟ್ಟಿ ಅವರು ಮಾನವಿಯತೆ ಮೆರೆದ ತಾಯಿ ಹೃದಯದ ಅಧಿಕಾರಿ. ಇವರು ಅಥಣಿ  ಪಿಎಸ್ಐ ಕುಮಾರ್ ಹಾಡ್ಕರ್ ಅವರ ನೆರವಿನಿಂದ ಮಹಿಳೆಯನ್ನು ಸುರಕ್ಷಿತ ಸ್ಥಳಕ್ಕೆ ಕೊಂಡೋಗಿದ್ದಾರೆ.

ಪ್ರವಾಹದ ಭೀತಿಯಿಂದ ತಮ್ಮ ಗ್ರಾಮಗಳಿಂದ ಸುರಕ್ಷಿತ ಸ್ಥಳಗಳಿಗೆ  ದರುರ್, ನದಿ ಇಂಗಳಗಾವ್ ,ಸಪ್ತ ಸಾಗರ ಗ್ರಾಮಸ್ಥರು ಈಗಾಗಲೇ ಗುಳೆ ಹೊರಟಿದ್ದಾರೆ. ಇಂತಹ ಸನ್ನಿವೇಶದಲ್ಲಿ ಮಹಿಳೆ ಸೇತುವೆಯಲ್ಲಿ ಸಿಕ್ಕಿಹಾಕಿಕೊಂಡಿದ್ದರು.

ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಪ್ರವಾಹದ ಭೀತಿ ಉಂಟಾದರೂ ತಾಲೂಕು ಆಡಳಿತ ಮಾತ್ರ ನಿರ್ಲಕ್ಷ್ಯವಹಿಸಿರುವುದು ಎದ್ದು ಕಾಣುತ್ತಿದೆ.

 ಇನ್ನಾದರೂ ಎಚ್ಚೆತ್ತುಕೊಂಡು ಜನರನ್ನು ಸುರಕ್ಷಿತ ಸ್ಥಳಗಳಿಗೆ ಆದಷ್ಟು ಬೇಗ ಸ್ಥಳಾಂತರ ಮಾಡುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು