9:48 PM Wednesday16 - July 2025
ಬ್ರೇಕಿಂಗ್ ನ್ಯೂಸ್
ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ

ಇತ್ತೀಚಿನ ಸುದ್ದಿ

ಪಿಎಸ್ ಐ ನೇಮಕಾತಿ ಹಗರಣ: ಮೊದಲ Rank ಪಡೆದ ರಚನಾ ವಿರುದ್ಧವೂ ಸಿಐಡಿಯಿಂದ ಕೇಸು ದಾಖಲು

02/05/2022, 19:10

ಬೆಂಗಳೂರು(reporterkarnataka.com): ಕಡು ಬಡತನದಲ್ಲಿ ಓದಿ ಪಿಎಸ್ ಐ ನೇಮಕಾತಿಯಲ್ಲಿ ಪಾಸ್ ಆಗಿ, ಹುದ್ದೆ ಪಡೆದಿದ್ದೇನೆ ಎಂದು ಪ್ರತಿಭಟನೆಯಲ್ಲಿ ಕಣ್ಣೀರ ಕತೆ ಹೇಳಿದ್ದ ಮೊದಲ Rank ಬಂದಿದ್ದ ರಚನಾ ವಿರುದ್ಧವೂ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಕಳೆದ ಏ.30ರಂದು ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ಸರ್ಕಾರ ಪಿಎಸ್ ಐ ನೇಮಕಾತಿ ಮರು ಪರೀಕ್ಷೆ ವಿರೋಧಿಸಿ ನಡೆಸಿದ ಆಯ್ಕೆ ಪಟ್ಟಿಯಲ್ಲಿನ ಅಭ್ಯರ್ಥಿಗಳ ಪ್ರತಿಭಟನೆಯಲ್ಲಿ, ಮಹಿಳಾ ವಿಭಾಗದಲ್ಲಿ ಮೊದಲ Rank ಪಡೆದ ಅಭ್ಯರ್ಥಿ ರಚನಾ ಭಾಗಿಯಾಗಿ ತನ್ನ ಕಡು ಬಡತನದಲ್ಲಿ ಓದಿ ಪರೀಕ್ಷೆ ಪಾಸ್ ಮಾಡಿದ್ದನ್ನು ಹೇಳಿಕೊಂಡಿದ್ದರು.

ನಮ್ಮ ತಂದೆ ಹೆಣ್ಣು ಮಗು ಎನ್ನುವ ಕಾರಣಕ್ಕೆ ನನ್ನನ್ನು ಬಿಟ್ಟು ಹೋಗಿದ್ದರು. ತಾಯಿ ಸಾಕಿದ್ದು ಕಡು ಬಡತನದಲ್ಲಿ ಓದಿ ಪಿಎಸ್ ಐ ನೇಮಕಾತಿಯಲ್ಲಿ ಪಾಸ್ ಆಗಿ, ಹುದ್ದೆ ಪಡೆದಿದ್ದು ಪರೀಕ್ಷೆ ರದ್ದುಪಡಿಸಿರುವುದರಿಂದ ನಾನು ಸಂಕಷ್ಟಕ್ಕೆ ಸಿಲುಕಿದ್ದೇನೆ ಎಂದಿದ್ದರು

ಪಿಎಸ್ ಐ ನೇಮಕಾತಿ ಅಕ್ರಮದಲ್ಲಿ ನಾನು ಭಾಗಿಯಾಗೇ ಇಲ್ಲ. ಕಷ್ಟದಿಂದ ಬೆಳೆದು ಬಂದಿದ್ದೇನೆ. ನಾನು, ನಮ್ಮ ತಾಯಿ ಇಬ್ಬರೇ ಇದ್ದೇವೆ. ಕಡು ಬಡತನದಲ್ಲೇ ಓದಿ, ಪಿಎಸ್ ಐ ಪರೀಕ್ಷೆಯಲ್ಲಿ ಮಹಿಳಾ ವಿಭಾಗದಲ್ಲಿ ಮೊದಲ Rank ಪಡೆದಿದ್ದೇನೆ. ಆದರೆ ಸರ್ಕಾರ ಮರು ಪರೀಕ್ಷೆ ಆದೇಶ ಕೇಳಿ ಆತಂಕ ಗೊಂಡಿದ್ದೇನೆ ಎಂದು ಹೇಳಿದ್ದರು.

ಇದೀಗ ರಚನಾ ವಿರುದ್ಧವೂ ಎಫ್ ಐಆರ್ ದಾಖಲಾಗಿದೆ. ಅವರ ಒಎಂಆರ್ ಶೀಟ್ ಹಾಗೂ ಕಾರ್ನ್ ಶೀಟ್ ನಲ್ಲಿ ವ್ಯತ್ಯಾಸ ಕಂಡು ಬಂದ ಕಾರಣ, ಅವರ ವಿರುದ್ಧವೂ ಸಿಐಡಿ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಪರಿಣಾಮ, ಎಫ್ ಐಆರ್ ದಾಖಲಾಗಿದೆ. ಇವರಷ್ಟೇ ಅಲ್ಲದೇ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಾಗೃತ್ ಸೇರಿದಂತೆ 22 ಮಂದಿಯ ವಿರುದ್ಧವೂ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು