10:16 PM Tuesday17 - February 2026
ಬ್ರೇಕಿಂಗ್ ನ್ಯೂಸ್
ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ

ಇತ್ತೀಚಿನ ಸುದ್ದಿ

ಪಿಎಸ್‍ಐ ಹುದ್ದೆ ನೇಮಕಾತಿಯಲ್ಲಿ ಭಾರೀ ಅವ್ಯವಹಾರ ಆರೋಪ: ಬಿಜೆಪಿ ನಾಯಕಿ ಮನೆಗೆ ಸಿಐಡಿ ದಾಳಿ

17/04/2022, 23:41

ಕಲಬುರಗಿ(reporterkarnataka.com): ರಾಜ್ಯದಲ್ಲಿ 545 ಪಿಎಸ್‍ಐ ಹುದ್ದೆ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪದ ಬಗ್ಗೆ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು ಇಂದು ಬಿಜೆಪಿ ಜಿಲ್ಲಾ ನಾಯಕಿ ದಿವ್ಯಾ ಹಾಗರಗಿ ಮನೆಗೆ ದಾಳಿ ನಡೆಸಿದೆ.

ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ಬಿಜೆಪಿ ಮುಖಂಡೆ ದಿವ್ಯಾ ಹಾಗರಗಿ ಅವರ ಮನೆಯನ್ನು ಶೋಧಿಸಲು ಸಿಐಡಿ ಡಿವೈಎಸ್‌ಪಿ ಶಂಕರಗೌಡ ನೇತೃತ್ವದ ತಂಡ ಭೇಟಿ ನೀಡಿದೆ.

ದಿವ್ಯಾ ಹಾಗರಗಿ ಅವರು ಕಳೆದ 3-4 ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರ ಪತಿ ರಾಜೇಶ್ ಅವ​ರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ದಿವ್ಯಾ ಅವರು ವಿಜಯಪುರಕ್ಕೆ ಹೋಗಿರುವುದಾಗಿ ವಿಚಾರಣೆ ವೇಳೆ ರಾಜೇಶ್ ಹಾಗರಗಿ ಮಾಹಿತಿ ನೀಡಿದ್ದಾರೆ.

ದಿವ್ಯಾ ಹಾಗರಗಿಗೆ ಅವರಿಗೆ ಸೇರಿದ್ದ ಜ್ಞಾನಜೋತಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಪರೀಕ್ಷಾ ಅಕ್ರಮ ನಡೆದಿತ್ತು. ಇದೇ ಶಾಲೆಯ ಮೂವರು ಮಹಿಳಾ ಕೊಠಡಿ ಮೇಲ್ವಿಚಾರಕರು, ಇದೇ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದ ನಾಲ್ವರು ಅಭ್ಯರ್ಥಿಗಳು ಸೇರಿ ಒಟ್ಟು ಏಳು ಜನರನ್ನು ಈಗಾಗಲೇ ಸಿಐಡಿ ತಂಡ ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು