11:48 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಪಿಎಸ್‍ಐ ಹುದ್ದೆ ನೇಮಕಾತಿಯಲ್ಲಿ ಭಾರೀ ಅವ್ಯವಹಾರ ಆರೋಪ: ಬಿಜೆಪಿ ನಾಯಕಿ ಮನೆಗೆ ಸಿಐಡಿ ದಾಳಿ

17/04/2022, 23:41

ಕಲಬುರಗಿ(reporterkarnataka.com): ರಾಜ್ಯದಲ್ಲಿ 545 ಪಿಎಸ್‍ಐ ಹುದ್ದೆ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪದ ಬಗ್ಗೆ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು ಇಂದು ಬಿಜೆಪಿ ಜಿಲ್ಲಾ ನಾಯಕಿ ದಿವ್ಯಾ ಹಾಗರಗಿ ಮನೆಗೆ ದಾಳಿ ನಡೆಸಿದೆ.

ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ಬಿಜೆಪಿ ಮುಖಂಡೆ ದಿವ್ಯಾ ಹಾಗರಗಿ ಅವರ ಮನೆಯನ್ನು ಶೋಧಿಸಲು ಸಿಐಡಿ ಡಿವೈಎಸ್‌ಪಿ ಶಂಕರಗೌಡ ನೇತೃತ್ವದ ತಂಡ ಭೇಟಿ ನೀಡಿದೆ.

ದಿವ್ಯಾ ಹಾಗರಗಿ ಅವರು ಕಳೆದ 3-4 ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರ ಪತಿ ರಾಜೇಶ್ ಅವ​ರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ದಿವ್ಯಾ ಅವರು ವಿಜಯಪುರಕ್ಕೆ ಹೋಗಿರುವುದಾಗಿ ವಿಚಾರಣೆ ವೇಳೆ ರಾಜೇಶ್ ಹಾಗರಗಿ ಮಾಹಿತಿ ನೀಡಿದ್ದಾರೆ.

ದಿವ್ಯಾ ಹಾಗರಗಿಗೆ ಅವರಿಗೆ ಸೇರಿದ್ದ ಜ್ಞಾನಜೋತಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಪರೀಕ್ಷಾ ಅಕ್ರಮ ನಡೆದಿತ್ತು. ಇದೇ ಶಾಲೆಯ ಮೂವರು ಮಹಿಳಾ ಕೊಠಡಿ ಮೇಲ್ವಿಚಾರಕರು, ಇದೇ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದ ನಾಲ್ವರು ಅಭ್ಯರ್ಥಿಗಳು ಸೇರಿ ಒಟ್ಟು ಏಳು ಜನರನ್ನು ಈಗಾಗಲೇ ಸಿಐಡಿ ತಂಡ ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು