7:59 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಪಿಎಸ್‌ಐ ನೇಮಕಾತಿ ಹಗರಣ: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ಸಿಐಡಿ ಮತ್ತೆ ನೋಟಿಸ್

05/05/2022, 10:38

ಬೆಂಗಳೂರು(reporterkarnataka.com): ಪಿಎಸ್‌ಐ ನೇಮಕಾತಿ ಅಕ್ರಮದ ವಿಚಾರಣೆಗೆ ಸಂಬಂಧಿಸಿದಂತೆ ಹಾಜರಾಗಲು ಶಾಸಕ ಪ್ರಿಯಾಂಕ ಖರ್ಗೆಗೆ ಸಿಐಡಿ ಮತ್ತೆ ನೋಟಿಸ್ ಜಾರಿಗೊಳಿಸಿದೆ.

ಪ್ರಿಯಾಂಕ ಖರ್ಗೆ ಅವರಿಗೆ ಪಿಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಈಗಾಗಲೇ ಎರಡು ಬಾರಿ ಸಿಐಡಿ ನೋಟಿಸ್ ಜಾರಿಗೊಳಿಸಿತ್ತು. ಖರ್ಗೆ ಲಿಖಿತ ಉತ್ತರ ಕೂಡ ನೀಡಿದ್ದರು.

ಆದರೆ ಪ್ರಕರಣದಲ್ಲಿ ನೀವು ಸಲ್ಲಿಸಿರುವ ಉತ್ತರದಲ್ಲಿ ಪ್ರಕರಣಕ್ಕೆ ಸಂಬಂಧವಿಲ್ಲದ ಸಂಗತಿಗಳಿವೆ. ಹೀಗಾಗಿ ಮತ್ತೆ ತಮ್ಮ ಬಳಿ ಪ್ರಕರಣ ಸಂಬಂಧ ಇರುವಂತ ದಾಖಲಾತಿ, ಮಾಹಿತಿ ಸಲ್ಲಿಸುವಂತೆ ಸಿಐಡಿ ನೋಟಿಸ್ ಜಾರಿಗೊಳಿಸಿದೆ.

ಈ ಬಗ್ಗೆ ಶಾಸಕ ಪ್ರಿಯಾಂಕ್ ಖರ್ಗೆಗೆ ಪಿಎಸ್‌ಐ ನೇಮಕಾತಿ ಅಕ್ರಮದ ತನಿಖೆ ನಡೆಸುತ್ತಿರುವ ಸಿಐಡಿಯ ಸಹಾಯಕ ತನಿಖಾಧಿಕಾರಿ ಹಾಗೂ ಪೊಲೀಸ್ ಉಪಾಧಿಕ್ಷಕ ನರಸಿಂಹಮೂರ್ತಿ ಪಿ ಅವರು ನೋಟಿಸ್ ಜಾರಿ ಮಾಡಿದ್ದು,’ ದಿನಾಂಕ 28-04-2022ರಂದು ಒಂದು ಉತ್ತರವನ್ನು ನೀವು ಸಲ್ಲಿಸಿದ್ದು, ಅದನ್ನು ಪರಿಶೀಲಿಸಿದಾಗ ಅದರಲ್ಲಿ ಪ್ರಕರಣಕ್ಕೆ ಸಂಬಂಧವಿಲ್ಲದ ಸಂಗತಿಗಳು ಕಂಡು ಬಂದಿರುತ್ತವೆ ಎಂದಿದ್ದಾರೆ.

ಸಾರ್ವಜನಿಕ ಜಾಲತಾಣಗಳಲ್ಲಿ ಎಷ್ಟೋ ಅನಗತ್ಯ ಹಾಗೂ ನೈಜತೆಯಿಲ್ಲದ ಮಾಹಿತಿಗಳು ಹರಿದಾಡುತ್ತಿದ್ದು, ಅವುಗಳನ್ನು ತನಿಖೆಯಲ್ಲಿ ಸಾಕ್ಷ್ಯವನ್ನಾಗಿಸಿ, ಅಳವಡಿಸಿಕೊಳ್ಳಲು ಬರುವುದಿಲ್ಲ. ಆದರೆ ತಾವು ಕಲಬುರ್ಗಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಆಡಿಯೋ ಕ್ಲಿಪಿಂಗ್ ಹಾಜರು ಪಡಿಸಿ, ತಮ್ಮ ಬಳಿ ಇನ್ನೂ ಸಾಕ್ಷ್ಯಾಧಾರಗಳು ಇವೆ ಎಂದು ಹೇಳಿದ್ದನ್ನು ಗಮನಿಸಲಾಗಿದೆ. ತಾವು ಅವುಗಳನ್ನು ಹಾಜರು ಪಡಿಸುವ ಮೊದಲು, ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಿದ ನಂತರ

ಮಾಧ್ಯಮದವರ ಮುಂದೆ ಹಾಜರುಪಡಿಸಿರುತ್ತೀರಿ ಎಂದು ಭಾವಿಸಿ, ಸದರಿ ನೋಟೀಸ್ ಅನ್ನು ನೀಡಲಾಗಿತ್ತು ಎಂದಿದ್ದಾರೆ.

ಈ ಹಿನ್ನಲೆಯಲ್ಲಿ ಜವಾಬ್ದಾರಿಯುತ ಮತ್ತು ಗೌರವಾನ್ವಿತ ಶಾಸಕರಾದ ತಾವು, ಈ ನೋಟಿಸ್ ಮುಟ್ಟಿದ ಎರಡು ದಿನಗಳೊಳಗಾಗಿ ಕೆಳಗೆ ಸಹಿ ಮಾಡಿದ ಸಹಾಯಕ ತನಿಖಾಧಿಕಾರಿಯವರ ಮುಂದೆ, ಹಾಜರಾಗಿ, ಪ್ರಕರಣದ ತನಿಖೆಗೆ ಸಹಾಯವಾಗಬಹುದಾದ ತಮ್ಮ ಬಳಿಯಿರುವಂತ ದಾಖಲಾತಿ ಹಾಗೂ ಮಾಹಿತಿಯನ್ನು ಹಾಜರುಪಡಿಸಲು ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು