9:04 AM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಗೆ ಮರುಳು ಮಾಫಿಯಾ ನಂಟು?: ದಿವ್ಯಾ ಹಾಗರಗಿಗೆ 18 ದಿನ ಆಶ್ರಯ ನೀಡಿದ್ದು ಯಾರು?

02/05/2022, 09:34

ಕಲಬುರಗಿ(reporterkarnataka.com): ಪಿಎಸ್‌ಐ ನೇಮಕಾತಿ ಪರೀಕ್ಷಾ ಅಕ್ರಮ ಆರೋಪದ ಹಿನ್ನೆಲೆ ಬಂಧಿತರಾದ ದಿವ್ಯಾ ಹಾಗರಗಿಗೆ ಮರಳು ಮಾಫಿಯಾದ ನಂಟು ಬಯಲಾಗಿದೆ. ಹಾಗರಗಿಗೆ ಆಶ್ರಯ ನೀಡಿದ್ದ ಮಹಾರಾಷ್ಟದ ಸೋಲಾಪುರದ ಉದ್ಯಮಿಯೊಬ್ಬರನ್ನು ಕೂಡ ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ದಿವ್ಯಾ ಹಾಗರಗಿ ಸೇರಿದಂತೆ 6 ಮಂದಿ ಆರೋಪಿಗಳಿಗೆ ಈಗಾಗಲೇ 11 ದಿನಗಳ ಸಿಐಡಿ ಕಸ್ಟಡಿ ನೀಡಲಾಗಿದೆ. ದಿವ್ಯಾ ಹಾಗರಗಿ, ಸುರೇಶ್ ಕಾಟೆಗಾಂವ್, ಅರ್ಚನಾ, ಸುನಿತಾ, ಕಾಳಿದಾಸ್, ಸದ್ದಾಂ ಹಾಗೂ ಜ್ಯೋತಿ ಪಾಟೀಲ್ ಎಂಬುವರನ್ನು 11 ದಿನ ಸಿಐಡಿ ಕಸ್ಟಡಿಗೆ ಒಪ್ಪಿಸಲಾಗಿದೆ.

ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ 18 ದಿನಗಳ ಕಾಲ ತಲೆಮರೆಸಿಕೊಂಡಿದ್ದ ದಿವ್ಯಾ ಹಾಗೂ ಇತರರರನ್ನು ಸಿಐಡಿ ಪೊಲೀಸರು ಗುರುವಾರ ತಡರಾತ್ರಿ ಪುಣೆಯಲ್ಲಿ ಬಂಧಿಸಿ

ಕಲಬುರಗಿಗೆ ಕರೆತಂದಿದ್ದಾರೆ. ಶುಕ್ರವಾರ ವೈದ್ಯಕೀಯ ತಪಾಸಣೆ ಬಳಿಕ ಅಧಿಕಾರಿಗಳು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಪ್ರಕರಣದಲ್ಲಿ ದಿವ್ಯಾಳೊಂದಿಗೆ ಮರಳು ಮಾಫಿಯಾ ಡಾನ್
ಕಾಟೆಗಾಂವ್ ಅವರನ್ನು ಬಂಧಿಸಲಾಗಿದೆ.

ತಲೆಮರೆಸಿಕೊಂಡಿದ್ದ ದಿವ್ಯಾ ಹಾಗರಗಿ ಹಾಗೂ ಆಕೆಯ ತಂಡಕ್ಕೆ ಆಶ್ರಯ ನೀಡಿದ್ದ ಮಹಾರಾಷ್ಟ್ರ ಸೋಲಾಪುರದ ಅಕ್ಕಲಕೋಟ ಉದ್ಯಮಿ ಸುರೇಶ ಕಾಟೆಗಾಂವ್ ಸೇರಿ 6 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಮರಳು ಮಾಫಿಯಾ ಡಾನ್ ಸುರೇಶ್ ಕಾಟೆಗಾಂವ್ ಮತ್ತು ಕಾಳಿದಾಸನನ್ನೂ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮದ ಕೇಂದ್ರಬಿಂದು ಜ್ಞಾನಜ್ಯೋತಿ ಶಾಲೆಯ ಒಡತಿ ದಿವ್ಯಾ ಹಾಗರಗಿ ಹಾಗೂ ಉದ್ಯಮಿ, ಮರಳು ಮಾಫಿಯಾ ಡಾನ್ ಸುರೇಶ ಕಾಟೆಗಾಂವ್ ಸುಮಾರು ದಿನಗಳಿಂದ ಪರಿಚಿತರಾಗಿದ್ದು, ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಉದ್ಯಮಿ

ಹಾಗೂ ಮರಳು ಮಾಫಿಯಾ ಡಾನ್ ಸುರೇಶ್ ಕಾಟೆಗಾಂವ್ ಮನೆಯಲ್ಲಿ ತನ್ನ ಗ್ಯಾಂಗ್ ಜತೆ ದಿವ್ಯಾ ಅಲ್ಲಿಯೇ ಆಶ್ರಯ ಪಡೆದಿದ್ದಳು ಎಂದು ತಿಳಿದು ಬಂದಿದೆ.

ತಲೆ ಮರೆಸಿಕೊಂಡಿದ್ದ ಆರೋಪಿಗಳು 18 ದಿನಗಳಿಂದ ಮೊಬೈಲ್ ಬಳಕೆ ನಿಲ್ಲಿಸಿದ್ದರು. ಎಲ್ಲರ ನಡುವೆ ಒಂದೇ ಒಂದು ಹ್ಯಾಂಡ್ ಸೆಟ್ ಬಳಕೆ ಮಾಡಿ ಹತ್ತಾರು ಸಿಮ್ ಬದಲಾವಣೆ ಮಾಡುತ್ತಿದ್ದರು. ಪದೇಪದೆ ಆಶ್ರಯ ತಾಣಗಳನ್ನು ಬದಲಾವಣೆ ಮಾಡಿ ಸಿಐಡಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು