6:16 PM Tuesday26 - August 2025
ಬ್ರೇಕಿಂಗ್ ನ್ಯೂಸ್
Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ಪಿಯು ಪಠ್ಯ ಪುಸ್ತಕ ಪರಿಷ್ಕರಣೆ ಇಲ್ಲ; ಹಿಂದಿನ ಪಠ್ಯವನ್ನೇ ಮುಂದುವರೆಸುತ್ತೇವೆ: ಸಚಿವ ಬಿ.ಸಿ. ನಾಗೇಶ್

08/06/2022, 09:16

ಬೆಂಗಳೂರು(reporterkarnataka.com):

ಪಠ್ಯಪುಸ್ತಕರ ಪರಿಷ್ಕರಣೆ ವಿವಾದ ಭುಗಿಲೆದ್ದ ಬಳಿಕ ರಾಜ್ಯ ಬಿಜೆಪಿ ಸರಕಾರ ಎಚ್ಚೆತ್ತುಕೊಂಡಿದೆ. ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಇಲ್ಲ, ಈ ಹಿಂದಿನ ಪಠ್ಯಪುಸ್ತಕವೇ ಯಥಾವತ್ತಾಗಿ ಇರಲಿದೆ ಎಂಬುದಾಗಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟ ಪಡಿಸಿದ್ದಾರೆ.

ರೋಹಿತ್​ ಚಕ್ರತೀರ್ಥ ಅವರ‌ ಸಮಿತಿಯನ್ನೇ ಪಿಯು ಪಠ್ಯಪರಿಷ್ಕರಣೆಗೆ‌ ನೇಮಿಸಲಾಗಿತ್ತು.

ಆದರೆ ಈಗ‌ ಸಮಿತಿಯನ್ನೇ‌ ವಿಸರ್ಜಿಸಲಾಗಿದೆ ಎಂದು ಸಚಿವರು ಹೇಳಿದರು.

ಪಿಯು ಪಠ್ಯ ಪರಿಷ್ಕರಣೆಯಿಂದ ಸರ್ಕಾರ ಹಿಂದೆ ಸರಿದಿದೆ.ದ್ವಿತೀಯ ಪಿಯುಸಿ ಅಧ್ಯಾಯ 4.2 ಪರಿಷ್ಕರಣೆಯಲ್ಲಿ ಹೊಸ ಧರ್ಮಗಳ ಉದಯದ ಬಗ್ಗೆ ಅಂಶಗಳನ್ನು ಸೇರಿಸಲಾಗಿತ್ತು. ಪರಿಷ್ಕರಣೆ ಕಾರ್ಯವನ್ನು ರೋಹಿತ್​​ಗೆ ನೀಡಲಾಗಿತ್ತು. ಆದರೆ, ರೋಹಿತ್ ಸಮಿತಿಯನ್ನು ಈಗಾಗಲೇ ವಿಸರ್ಜಿಸಲಾಗಿದೆ. ಹಾಗಾಗಿ ಪಿಯು ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಲಾಗಿದ್ದು, ಅದರ ವರದಿ ಪಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಶಾಲಾ ಪಠ್ಯಪುಸ್ತಕ ಕುರಿತಂತೆ ಬರಗೂರು ಸಮಿತಿ ನೀಡಿದ್ದ ಬಸವಣ್ಣ ಪಠ್ಯವನ್ನು ಶಾಲಾ ಪಠ್ಯಗಳಲ್ಲಿ ಮುಂದುವರೆಸಲಾಗುತ್ತದೆ. ಅಂಬೇಡ್ಕರ್ ಪಠ್ಯ ಸೇರಿದಂತೆ ಇತರೆ ಲೋಪಗಳನ್ನು ಸರಿ ಪಡಿಸಲಾಗುತ್ತದೆ ಎಂಬುದಾಗಿ ಸ್ಪಷ್ಟ ಪಡಿಸಿದರು.

ಒಂದೇ‌ ಒಂದು ಪಠ್ಯವನ್ನುಪರಿಷ್ಕರಿಸೋಕೆ ಅಂತಾ‌ ಸಮಿತಿ‌ಗೆ ವಹಿಸಲಾಗಿತ್ತು. ಪಿಯು‌ ಪಠ್ಯಪುಸ್ತಕ‌ ಪರಿಷ್ಕರಣೆಗಾಗಿ ಮತ್ತೊಂದು ಸಮಿತಿ‌‌ ನೇಮಿಸಿಲ್ಲ. ಪರಿಷ್ಕರಣೆ ವಿಚಾರ‌ ಎಲ್ಲಿಂದ ಬರಲಿದೆ? ದ್ವಿತೀಯ‌ ಪಿಯು ಪಠ್ಯಪುಸ್ತಕ ಪರಿಷ್ಕರಣೆ ಮಾಡಿಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು