11:08 AM Tuesday19 - May 2026
ಬ್ರೇಕಿಂಗ್ ನ್ಯೂಸ್
ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು.

ಇತ್ತೀಚಿನ ಸುದ್ದಿ

ಪಿಯು ವಿದ್ಯಾರ್ಥಿನಿಗೆ ಬ್ಲ್ಯಾಕ್‌ಮೇಲ್‌: 1.9 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, ಹಣ ಸುಲಿಗೆ ಮಾಡಿದ ಪ್ರಿಯಕರ

28/08/2022, 19:53

ಬೆಂಗಳೂರು (reporterkarnataka.com):
ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಪ್ರಿಯಕರ ಬ್ಲಾಕ್‌ಮೇಲ್‌ ಮಾಡಿ 1.9 ಕೆಜಿ ಚಿನ್ನ ಹಾಗೂ 5 ಕೆಜಿ ಬೆಳ್ಳಿ ವಸ್ತುಗಳನ್ನು ಸುಲಿಗೆ ಮಾಡಿದ ಘಟನೆ 
ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ತನ್ನೊಂದಿಗಿರುವ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ 
ಪ್ರಿಯಕರ ಸುಮಿತ್ ಎಂಬಾತ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಗೆ ಬ್ಲಾಕ್‌ಮೇಲ್‌ ಮಾಡಿ 1.9 ಕೆಜಿ ಚಿನ್ನ ಹಾಗೂ 5 ಕೆಜಿ ಬೆಳ್ಳಿ ವಸ್ತುಗಳನ್ನು ಸುಲಿಗೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿ ಯುವಕನನ್ನು ಬ್ಯಾಟರಾಯಪುರ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ 300 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ. 

ಇತ್ತೀಚೆಗೆ ಆಕೆಯನ್ನು ಭೇಟಿಯಾಗಿ ಸುಮಿತ್,ನೀನು ಹಣ ಕೊಡದೆ ಹೋದರೆ ನನ್ನ ಮೊಬೈಲ್‌ನಲ್ಲಿರುವ ತೆಗೆದಿರುವ ಫೋಟೋಗಳನ್ನು ಆಶ್ಲೀಲ ರೀತಿ ಎಡಿಟ್‌ ಮಾಡಿ ನಿಮ್ಮ ತಂದೆಗೆ ತೋರಿಸುತ್ತೇನೆ. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಸಹ ಹರಿಬಿಡುತ್ತೇನೆ ಎಂದು ಸಂತ್ರಸ್ತೆಗೆ ಆತ ಬೆದರಿಸಿದ್ದ.

ಬ್ಲಾಕ್‌ಮೇಲ್‌ಗೆ ಹೆದರಿ ಆಕೆ, ಮೊದ ಮೊದಲು ಮನೆಯಲ್ಲಿ ತಂದೆಗೆ ತಿಳಿಯದಂತೆ .2,500 ರಿಂದ 10 ಸಾವಿರ ರವರೆಗೆ ಕೊಟ್ಟಿದ್ದಳು. ಪದೇ ಪದೇ ಆತ ಹಣಕ್ಕೆ ಬೇಡಿಕೆ ಇಡುತ್ತಿದ್ದ. ಕೆಲ ದಿನಗಳ ಹಿಂದೆ ಮಾತನಾಡುವ ನೆಪದಲ್ಲಿ ಸಂತ್ರಸ್ತೆಯನ್ನು ಆರೋಪಿ ಕರೆಸಿಕೊಂಡಿದ್ದ. ಆಗ ಕುಡಿಯಲು ನೀರಿನ ಬಾಟಲ್‌ ಕೊಟ್ಟಿದ್ದ ಆತ, ‘ನೀರು ಕುಡಿದ ಬಳಿಕ ಅದರಲ್ಲಿ ಡ್ರಗ್‌್ಸ ಮಿಶ್ರಣ ಮಾಡಲಾಗಿತ್ತು.

ಮನೆಯಲ್ಲಿರುವ ಬಂಗಾರ ತಂದು ಕೊಡದೆ ಹೋದರೆ ಆಶ್ಲೀಲ ವಿಡಿಯೋ ಸಾರ್ವಜನಿಕವಾಗಿ ಪ್ರದರ್ಶಿಸುತ್ತೇನೆ ಎಂದು ಬೆದರಿಸಿದ್ದ. ಈ ಮಾತಿಗೆ ಭೀತಿಗೊಂಡ ಆಕೆ, ಮನೆಯಲ್ಲಿದ್ದ 1.900 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ವಸ್ತುಗಳನ್ನು ತೆಗೆದುಕೊಂಡು ಹೋಗಿ ಆರೋಪಿಗೆ ಕೊಟ್ಟಿದ್ದಳು ಎಂದು ದೂರಿನಲ್ಲಿ ಹೇಳಲಾಗಿದೆ.

ಕೆಲ ದಿನಗಳ ಹಿಂದೆ ಮನೆಯಲ್ಲಿದ್ದ ಚಿನ್ನಕ್ಕೆ ವಿಮೆ ನವೀಕರಣ ಮಾಡಿಸುವ ಮಾಡಿಸುವ ಸಲುವಾಗಿ ಸಂತ್ರಸ್ತೆಯ ತಂದೆ, ಮನೆಯಲ್ಲಿದ್ದ ಬಂಗಾರವನ್ನು ತೆಗೆದುಕೊಳ್ಳಲು ಹೋಗಿದ್ದಾರೆ. ಆದರೆ ಆ ವೇಳೆ ಬಾಕ್ಸ್‌ಗಳಲ್ಲಿ ಚಿನ್ನ ಕಾಣದೆ ಗಾಬರಿಗೊಂಡಿದ್ದಾರೆ. ಆಗ ಮಗಳನ್ನು ವಿಚಾರಿಸಿದಾಗ ಸುಲಿಗೆ ಕೃತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು