2:15 AM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಪುಡಾ ಅಧ್ಯಕ್ಷ ಸ್ಥಾನಕ್ಕೆ ಭಾಸ್ಕರ ಕೋಡಿಂಬಾಳ ದಿಢೀರ್ ರಾಜೀನಾಮೆ: ಕಾರಣ ಏನು ಗೊತ್ತೇ?

13/07/2024, 19:07

ಪುತ್ತೂರು(reporterkarnataka.com): ಪುತ್ತೂರು ನಗರ ಅಭಿವೃದ್ಧಿ ಯೋಜನಾ ಪ್ರಾಧಿಕಾರ(ಪುಡಾ)ಅಧ್ಯಕ್ಷ ಸ್ಥಾನಕ್ಕೆ ಕೆ.ಭಾಸ್ಕರ ಕೋಡಿಂಬಾಳ ದಿಢೀರ್ ರಾಜೀನಾಮೆ ನೀಡಿದ್ದಾರೆ.
ಶಾಸಕ ಅಶೋಕ್ ರೈ ಮಾತಿನಿಂದ ನೊಂದು ಕೋಡಿಂಬಾಳ ಅವರು ಪುಡಾ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ಸಿನ ಹಿರಿಯ ನಾಯಕನ ಈ ರಾಜೀನಾಮೆ ನಿರ್ಧಾರ ಪುತ್ತೂರು ರಾಜಕೀಯ ವಲಯದಲ್ಲಿ ಸಣ್ಣ ಮಟ್ಟಿನ ಕಂಪನ ಉಂಟು ಮಾಡಿದೆ.
ಪುತ್ತೂರು ಶಾಸಕ ಅಶೋಕ್ ರೈ ಅವರು ಜೂ.11ರಂದು ಬೆಂಗಳೂರಿನಿಂದ ಕರೆ ಮಾಡಿ, ಪುಡಾ ಸತ್ತಿದೆ. ನಿಮ್ಮ ಕಾರ್ಯವೈಖರಿ ಬಗ್ಗೆ ಜನ ಮಾತನಾಡಲು ಶುರು ಮಾಡುತ್ತಾರೆ ಎಂದು ಹೇಳಿದರು. ನಾನು ಪುಡಾ ಅಧ್ಯಕ್ಷನಾಗಿ ಪದಗ್ರಹಣ ಮಾಡಿದಾಗ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಆಯಿತು. ಅದು ಜೂ.6 ರವರೆಗೆ ಇತ್ತು. ಬಳಿಕ ಸಿಕ್ಕ 22 ದಿನದಲ್ಲಿ ಕಟ್ ಕನ್ವರ್ಷನ್ ಹಾಗೂ ಶ್ರೀ ಮಹಾಲಿಂಗೇಶ್ವರ ದೇಗುಲದ ಬಿಲ್ ಮಂಜೂರು ಮಾಡುವ ಕಾರ್ಯವನ್ನು ಮಾಡಿದ್ದೇನೆ. ನನ್ನನ್ನು ಯಾವುದೇ ಶಿಫಾರಸು ಇಲ್ಲದೇ ಶಾಸಕರು ಆಯ್ಕೆ ಮಾಡಿದ್ದು, ಅವರಿಗೆ ನನ್ನ ಕಾರ್ಯವೈಖರಿ ಇಷ್ಟವಾಗದಿದ್ದಾಗ ರಾಜೀನಾಮೆ ನೀಡುವುದು ಸೂಕ್ತ ಎಂದು ಭಾವಿಸಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಭಾಸ್ಕರ ಕೋಡಿಂಬಾಳ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು