3:07 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಪುಡಾ ಅಧ್ಯಕ್ಷ ಸ್ಥಾನಕ್ಕೆ ಭಾಸ್ಕರ ಕೋಡಿಂಬಾಳ ದಿಢೀರ್ ರಾಜೀನಾಮೆ: ಕಾರಣ ಏನು ಗೊತ್ತೇ?

13/07/2024, 19:07

ಪುತ್ತೂರು(reporterkarnataka.com): ಪುತ್ತೂರು ನಗರ ಅಭಿವೃದ್ಧಿ ಯೋಜನಾ ಪ್ರಾಧಿಕಾರ(ಪುಡಾ)ಅಧ್ಯಕ್ಷ ಸ್ಥಾನಕ್ಕೆ ಕೆ.ಭಾಸ್ಕರ ಕೋಡಿಂಬಾಳ ದಿಢೀರ್ ರಾಜೀನಾಮೆ ನೀಡಿದ್ದಾರೆ.
ಶಾಸಕ ಅಶೋಕ್ ರೈ ಮಾತಿನಿಂದ ನೊಂದು ಕೋಡಿಂಬಾಳ ಅವರು ಪುಡಾ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ಸಿನ ಹಿರಿಯ ನಾಯಕನ ಈ ರಾಜೀನಾಮೆ ನಿರ್ಧಾರ ಪುತ್ತೂರು ರಾಜಕೀಯ ವಲಯದಲ್ಲಿ ಸಣ್ಣ ಮಟ್ಟಿನ ಕಂಪನ ಉಂಟು ಮಾಡಿದೆ.
ಪುತ್ತೂರು ಶಾಸಕ ಅಶೋಕ್ ರೈ ಅವರು ಜೂ.11ರಂದು ಬೆಂಗಳೂರಿನಿಂದ ಕರೆ ಮಾಡಿ, ಪುಡಾ ಸತ್ತಿದೆ. ನಿಮ್ಮ ಕಾರ್ಯವೈಖರಿ ಬಗ್ಗೆ ಜನ ಮಾತನಾಡಲು ಶುರು ಮಾಡುತ್ತಾರೆ ಎಂದು ಹೇಳಿದರು. ನಾನು ಪುಡಾ ಅಧ್ಯಕ್ಷನಾಗಿ ಪದಗ್ರಹಣ ಮಾಡಿದಾಗ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಆಯಿತು. ಅದು ಜೂ.6 ರವರೆಗೆ ಇತ್ತು. ಬಳಿಕ ಸಿಕ್ಕ 22 ದಿನದಲ್ಲಿ ಕಟ್ ಕನ್ವರ್ಷನ್ ಹಾಗೂ ಶ್ರೀ ಮಹಾಲಿಂಗೇಶ್ವರ ದೇಗುಲದ ಬಿಲ್ ಮಂಜೂರು ಮಾಡುವ ಕಾರ್ಯವನ್ನು ಮಾಡಿದ್ದೇನೆ. ನನ್ನನ್ನು ಯಾವುದೇ ಶಿಫಾರಸು ಇಲ್ಲದೇ ಶಾಸಕರು ಆಯ್ಕೆ ಮಾಡಿದ್ದು, ಅವರಿಗೆ ನನ್ನ ಕಾರ್ಯವೈಖರಿ ಇಷ್ಟವಾಗದಿದ್ದಾಗ ರಾಜೀನಾಮೆ ನೀಡುವುದು ಸೂಕ್ತ ಎಂದು ಭಾವಿಸಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಭಾಸ್ಕರ ಕೋಡಿಂಬಾಳ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು