7:28 PM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಪುದು ಬ್ರಹ್ಮಶ್ರೀ ನಾರಾಯಣ ಗುರು ವೇದಿಕೆಯಿಂದ ಪ್ರತಿಭಾ ಪುರಸ್ಕಾರ

08/08/2022, 16:26

ಬಂಟ್ವಾಳ:(reporterkarnataka.com):ಬಂಟ್ವಾಳ ಪುದು ಗ್ರಾಮದ ಬ್ರಹ್ಮಶ್ರೀ ನಾರಾಯಣ ಗುರು ವೇದಿಕೆಯ 8ನೇ ವಾರ್ಷಿಕ ಮಹಾ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಆದಿತ್ಯವಾರ ಪುದು ಕುಲಾಲ ಭವನದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಮುಂಡ ಯಾನೆ ಮೋನಪ್ಪ ಪೂಜಾರಿ ಸುಜೀರು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಯಾಗಿ ಕುದ್ರೋಳಿ ಗೋಕರ್ಣನಾಥೇಶ್ವರ
ಕ್ಷೇತ್ರದ ಕೋಶಾಧಿಕಾರಿ ಆರ್. ಪದ್ಮರಾಜ್ ಮಾತನಾಡಿ
ಬಂಟ್ವಾಳ ತಾಲೂಕಿನ ಪುದು ಗ್ರಾಮದ ಬ್ರಹ್ಮಶ್ರೀ ನಾರಾಯಣಗುರು ವೇದಿಕೆಯಿಂದ ನಡೆಯುತ್ತಿರುವ ಸಮಾಜಮುಖಿ ಕಾರ್ಯಗಳು ಎಲ್ಲರಿಗೂ ಮಾದರಿ. ಈ ವೇದಿಕೆ ಮೂಲಕ ಗ್ರಾಮದಲ್ಲಿರುವ ಸುಮಾರು 350 ಬಿಲ್ಲವ ಕುಟುಂಬಗಳ ಮಾಹಿತಿ ಸಂಗ್ರಹ ಕಾರ್ಯ ನಡೆಸುವ ಮೂಲಕ ಎಲ್ಲರನ್ನೂ ಒಂದುಗೂಡಿಸುವ ಮೂಲ ಹಿರಿಯರ ಜತೆ ಯುವಕರನ್ನು ಮುಖ್ಯವಾಹಿನಿಯತ್ತ ತರಲು ತೊಡಗಿರುವುದು ಶ್ಲಾಘನೀಯ. ವೇದಿಕೆ ಇನ್ನಷ್ಟು ಸಮಾಜಮುಖಿ ಕಾರ್ಯ ನಡೆಸಲು ಈಗಾಗಲೇ ಯೋಜನೆ ರೂಪಿಸದ್ದು, ಈ ಎಲ್ಲ ಉತ್ತಮ ಕಾರ್ಯಗಳಿಗೂ ಬ್ರಹ್ಮಶ್ರೀ ನಾರಾಯಣ ಗುರುಗಳು, ಕುದ್ರೋಳಿ ಶ್ರೀ ಗೋಕರ್ಣನಾಥ ಮತ್ತು ಸಪರಿವಾರ ದೇವರು ಅನುಗ್ರಹ ಕರುಣಿಸಲಿ…ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ, ಉದ್ಯಮಿ ನಾಗೇಶ್ ಕೋಟ್ಯಾನ್, ನಾರಾಯಣ ಗುರು ಯುವ ವೇದಿಕೆ ಮಂಗಳೂರು ಸಲಹಾ ನಿರ್ದೇಶಕ ಎಂ.ಎಸ್. ಕೋಟ್ಯಾನ್, ಕಟ್ಟಡ ನಿರ್ಮಾಣ ಗುತ್ತಿಗೆದಾರ ಕೆ.ಉಮೇಶ ಸುವರ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಜಯಶ್ರೀ ಕೆ.ಎ., ಜಗದೀಶ ಬೊಳ್ಳನೆ,ಗೌರವಾಧ್ಯಕ್ಷ ನಾಗಪ್ಪ ಪೂಜಾರಿ ಕಚೇಲ, ಕೋಶಾಧಿಕಾರಿ ಅಶೋಕ ಹೊಗೆಗದ್ದೆ, ಕಾರ್ಯದರ್ಶಿ ಕಿಶೋರ್ ಸುಜೀರ್, ನೀಲಯ ಅಗರಿ ಮತ್ತಿರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಶ್ರೀ ನಾರಾಯಣ ಗುರು ವೇದಿಕೆ ಅಧ್ಯಕ್ಷ ಬಾಬು ಪೂಜಾರಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು