1:13 PM Tuesday13 - May 2025
ಬ್ರೇಕಿಂಗ್ ನ್ಯೂಸ್
ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು…

ಇತ್ತೀಚಿನ ಸುದ್ದಿ

ಪುದು ಬ್ರಹ್ಮಶ್ರೀ ನಾರಾಯಣ ಗುರು ವೇದಿಕೆಯಿಂದ ಪ್ರತಿಭಾ ಪುರಸ್ಕಾರ

08/08/2022, 16:26

ಬಂಟ್ವಾಳ:(reporterkarnataka.com):ಬಂಟ್ವಾಳ ಪುದು ಗ್ರಾಮದ ಬ್ರಹ್ಮಶ್ರೀ ನಾರಾಯಣ ಗುರು ವೇದಿಕೆಯ 8ನೇ ವಾರ್ಷಿಕ ಮಹಾ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಆದಿತ್ಯವಾರ ಪುದು ಕುಲಾಲ ಭವನದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಮುಂಡ ಯಾನೆ ಮೋನಪ್ಪ ಪೂಜಾರಿ ಸುಜೀರು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಯಾಗಿ ಕುದ್ರೋಳಿ ಗೋಕರ್ಣನಾಥೇಶ್ವರ
ಕ್ಷೇತ್ರದ ಕೋಶಾಧಿಕಾರಿ ಆರ್. ಪದ್ಮರಾಜ್ ಮಾತನಾಡಿ
ಬಂಟ್ವಾಳ ತಾಲೂಕಿನ ಪುದು ಗ್ರಾಮದ ಬ್ರಹ್ಮಶ್ರೀ ನಾರಾಯಣಗುರು ವೇದಿಕೆಯಿಂದ ನಡೆಯುತ್ತಿರುವ ಸಮಾಜಮುಖಿ ಕಾರ್ಯಗಳು ಎಲ್ಲರಿಗೂ ಮಾದರಿ. ಈ ವೇದಿಕೆ ಮೂಲಕ ಗ್ರಾಮದಲ್ಲಿರುವ ಸುಮಾರು 350 ಬಿಲ್ಲವ ಕುಟುಂಬಗಳ ಮಾಹಿತಿ ಸಂಗ್ರಹ ಕಾರ್ಯ ನಡೆಸುವ ಮೂಲಕ ಎಲ್ಲರನ್ನೂ ಒಂದುಗೂಡಿಸುವ ಮೂಲ ಹಿರಿಯರ ಜತೆ ಯುವಕರನ್ನು ಮುಖ್ಯವಾಹಿನಿಯತ್ತ ತರಲು ತೊಡಗಿರುವುದು ಶ್ಲಾಘನೀಯ. ವೇದಿಕೆ ಇನ್ನಷ್ಟು ಸಮಾಜಮುಖಿ ಕಾರ್ಯ ನಡೆಸಲು ಈಗಾಗಲೇ ಯೋಜನೆ ರೂಪಿಸದ್ದು, ಈ ಎಲ್ಲ ಉತ್ತಮ ಕಾರ್ಯಗಳಿಗೂ ಬ್ರಹ್ಮಶ್ರೀ ನಾರಾಯಣ ಗುರುಗಳು, ಕುದ್ರೋಳಿ ಶ್ರೀ ಗೋಕರ್ಣನಾಥ ಮತ್ತು ಸಪರಿವಾರ ದೇವರು ಅನುಗ್ರಹ ಕರುಣಿಸಲಿ…ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ, ಉದ್ಯಮಿ ನಾಗೇಶ್ ಕೋಟ್ಯಾನ್, ನಾರಾಯಣ ಗುರು ಯುವ ವೇದಿಕೆ ಮಂಗಳೂರು ಸಲಹಾ ನಿರ್ದೇಶಕ ಎಂ.ಎಸ್. ಕೋಟ್ಯಾನ್, ಕಟ್ಟಡ ನಿರ್ಮಾಣ ಗುತ್ತಿಗೆದಾರ ಕೆ.ಉಮೇಶ ಸುವರ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಜಯಶ್ರೀ ಕೆ.ಎ., ಜಗದೀಶ ಬೊಳ್ಳನೆ,ಗೌರವಾಧ್ಯಕ್ಷ ನಾಗಪ್ಪ ಪೂಜಾರಿ ಕಚೇಲ, ಕೋಶಾಧಿಕಾರಿ ಅಶೋಕ ಹೊಗೆಗದ್ದೆ, ಕಾರ್ಯದರ್ಶಿ ಕಿಶೋರ್ ಸುಜೀರ್, ನೀಲಯ ಅಗರಿ ಮತ್ತಿರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಶ್ರೀ ನಾರಾಯಣ ಗುರು ವೇದಿಕೆ ಅಧ್ಯಕ್ಷ ಬಾಬು ಪೂಜಾರಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು