12:52 PM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಪುದು ಗ್ರಾಮ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಪೀಕರ್ ಖಾದರ್ ಉದ್ಘಾಟನೆ

13/07/2025, 10:58

ಬಂಟ್ವಾಳ(reporterkarnataka.com): ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು ಉದ್ಘಾಟಿಸಿದರು.


ಈ ವೇಳೆ ಮಾತನಾಡಿದ ಅವರು, ತನ್ನನ್ನು ಶಾಸಕನಾಗಿ, ಸಚಿವನಾಗಿ, ವಿಪಕ್ಷ ಉಪನಾಯಕನಾಗಿ ಹಾಗೂ ವಿಧಾನಸಭಾಧ್ಯಕ್ಷನಾಗಿ ಆಯ್ಕೆ ಮಾಡುವಲ್ಲಿ ಪುದು ಗ್ರಾಮಸ್ಥರ ಸಹಕಾರ ವಿಶೇಷವಾಗಿದ್ದು, ಪ್ರಸ್ತುತ ಗ್ರಾಮಕ್ಕೆ ೨.೧೦ ಕೋಟಿ ರೂ. ಅನುದಾನ ನೀಡಿ ಶೀಘ್ರ ಅದರ ಕಾಮಗಾರಿಗಳು ಆರಂಭಗೊಳ್ಳಲಿದೆ. ೨೪ ಗಂಟೆಯೂ ಕುಡಿಯುವ ನೀರು ಪೂರೈಸುವ ಯೋಜನೆಯ ಕಾಮಗಾರಿಯೂ ಕೊನೆಯ ಹಂತದಲ್ಲಿದೆ ಎಂದರು.
ಸ್ಥಳೀಯ ಸಾಮಾಜಿಕ ಮುಂದಾಳು ಅಬೂಬಕ್ಕರ್ ಕುಂಜತ್ಕಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಅತಿಥಿಗಳಾಗಿ ಜಿ.ಪಂ.ಮಾಜಿ ಸದಸ್ಯ ಉಮ್ಮರ್ ಫಾರೂಕ್ ಫರಂಗಿಪೇಟೆ, ಗ್ರಾ.ಪಂ.ಉಪಾಧ್ಯಕ್ಷ ಇಕ್ಬಾಲ್ ಸುಜೀರು, ಮಾಜಿ ಅಧ್ಯಕ್ಷರಾದ ರಮ್ಲಾನ್ ಮಾರಿಪಳ್ಳ, ಮೊಹಮ್ಮದ್ ಹನೀಫ್, ತ್ವಾಹ ಜುಮಾ ಮಸೀದಿ ಅಧ್ಯಕ್ಷ ಎಸ್.ಹಸನಬ್ಬ, ಧರ್ಮಗುರು ರಹಮಾ ಶಾಫಿ ಕೊಡಗು, ಮಾಜಿ ತಾ.ಪಂ.ಸದಸ್ಯ ಇಕ್ಬಾಲ್ ದರ್ಬಾರ್, ಗ್ರಾ.ಪಂ.ಸದಸ್ಯರಾದ ಅಬೂಬಕ್ಕರ್ ನಝೀರ್, ಇಶಾಮ್ ಫರಂಗಿಪೇಟೆ, ರಝಾಕ್ ಅಮ್ಮೆಮಾರ್, ಇಕ್ಬಾಲ್ ಪಾಡಿ, ಹನ್ಸ್ ಅಮ್ಮೆಮಾರ್, ಉದ್ಯಮಿ ಅಬ್ದುಲ್ ರಹಿಮಾನ್, ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ಪಿಎಸ್‌ಐ ಸುತೇಶ್ ಕೆ.ಪಿ, ಪ್ರಮುಖರಾದ ಮಹಮ್ಮದ್ ಬುಕಾರಿ, ನಜೀರ್ ಎನ್.ಎಂ, ನಿಜಾಮ್, ಶಾಕೀರ್, ಇಸ್ಮಾಯಿಲ್ ಐ.ಕೆ., ಅಬೂಬಕ್ಕರ್ ಸಿದ್ದೀಕ್, ಇಸ್ಮಾಯಿಲ್ ಕುಂಜತ್ಕಳ, ಲತೀಫ್ ಕರ್ಮಾರ್, ಶರೀಫ್, ನಿಶಾರ್, ಖಾಲಿದ್, ಸಫ್ವಾನ್ ಮೊದಲಾದವರಿದ್ದರು.
ಕೆ. ಮಹಮ್ಮದ್ ಮುಸ್ತಾಫ ಸ್ವಾಗತಿಸಿದರು. ಇರಾ ಗ್ರಾ.ಪಂ.ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು