9:52 AM Sunday23 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಪುದುಚೇರಿ: ಖ್ಯಾತ ಸಂಗೀತಗಾರ ಡಾ. ಎನ್. ಸೋಮಶೇಖರ ಮಯ್ಯರಿಗೆ ಪ್ರತಿಷ್ಠಿತ ಗಾನ ಗಂಧರ್ವ ಪ್ರಶಸ್ತಿ ಪ್ರದಾನ

25/01/2026, 20:22

ಪುದುಚೇರಿ(reporterkarnataka.com): ಸಂಗೀತ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಅಮೆರಿಕನ್ ವಿಸ್ಡಂ ಪೀಸ್ ಎಜುಕೇಶನ್ ಯುನಿವರ್ಸಿಟಿ ನೀಡುವ ಪ್ರತಿಷ್ಠಿತ ಗಾನ ಗಂಧರ್ವ ಪ್ರಶಸ್ತಿಯನ್ನು ಖ್ಯಾತ ಸಂಗೀತಗಾರ ಡಾ. ಎನ್. ಸೋಮಶೇಖರ ಮಯ್ಯ ಅವರಿಗೆ ಪುದುಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಮೂಲತಃ ಬಂಟ್ವಾಳ ತಾಲೂಕಿನವರಾದ ಡಾ. ಮಯ್ಯ ಅವರು ವೃತ್ತಿಯಲ್ಲಿ ಸರಕಾರಿ ಅಧಿಕಾರಿ. ಹಾಗೆ ಪ್ರವೃತ್ತಿಯಲ್ಲಿ ಒಬ್ಬ ಮಹಾನ್ ಸಂಗೀತಕಾರ. ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲಿ ಅವರು ಅನುಪಮ ಸೇವೆ ನೀಡಿದ್ದಾರೆ. ತನ್ನಲ್ಲಿ ಸುಪ್ತವಾಗಿದ್ದ ಸ್ವರ ಮಾಧುರ್ಯವನ್ನು ನೂರಾರು ಶಿಷ್ಯಂದಿರಿಗೆ ಧಾರೆ ಎರೆದ ಕೀರ್ತಿ ಅವರದ್ದಾಗಿದೆ.


ಡಾ ಮಯ್ಯ ಅವರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗಾಯನದಲ್ಲಿ ಈಗಾಗಲೇ ವಿದ್ವತ್, ವಿಶಾರದ, ಅಲಂಕಾರ್ ಸ್ನಾತಕೋತ್ತರ ಪದವಿಗಳನ್ನು ಪಡೆದವರಿದ್ದಾರೆ. ವಿವೇಕ ಜಾಗೃತಿ ಸಂಸ್ಥೆ, ಬಂಟ್ವಾಳ ನಾಗರಿಕರಿಂದ ಗಾನಕೇಸರಿ, ಇಂಡಿಯನ್ ಎಂಪಯರ್ ಯುನಿವರ್ಸಿಟಿಯಿಂದ ಗೌರವ ಡಾಕ್ಟರೇಟ್ ಪ್ರಶಸ್ತಿ, ಏಷಿಯಾ ಅಂತಾರಾಷ್ಟ್ರೀಯ ಕಲ್ಚರಲ್ ಅಕಾಡೆಮಿಯಿಂದ ಸಂಗೀತ ಸಾಮ್ರಾಟ್ ಪ್ರಶಸ್ತಿಯನ್ನು ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು