12:14 PM Tuesday25 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಫುಲ್ ಗಾಸ್ಪೆಲ್ ಪಾಸ್ಟರ್ಸ್ ಫೆಲೋಶಿಪ್’ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆಲುವಿಗಾಗಿ ವಿಶೇಷ ಪ್ರಾರ್ಥನೆ

11/04/2024, 16:12

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಸಾಮರಸ್ಯದ ಜೀವನವನ್ನು ಎದುರು ನೋಡುತ್ತಿದೆ. ಇದರಿಂದ ನಮ್ಮ ಜಿಲ್ಲೆಯಲ್ಲೇ ಉದ್ಯೋಗ ಸೃಷ್ಟಿ ಸಾಧ್ಯ ಎಂದು ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಬಲ್ಮಠದ ದಕ್ಷಿಣ ಕನ್ನಡ ಫುಲ್ ಗಾಸ್ಪೆಲ್ ಪಾಸ್ಟರ್ಸ್ ಫೆಲೋಶಿಪ್ ನಲ್ಲಿ ಅವರು ಮಾತನಾಡಿದರು.


ದಕ್ಷಿಣ ಕನ್ನಡದಲ್ಲಿ ಪ್ರೀತಿ ಹಂಚುವ ಕಾಯಕ ಕಡಿಮೆಯಾಗಿದೆ. ದ್ವೇಷಮಯ ವಾತಾವರಣವನ್ನು ಸೃಷ್ಟಿಸಲಾಗಿದೆ. ಇದರಿಂದ ಜಿಲ್ಲೆಗೆ ಕೋಮುವಾದಿ ಹಣೆಪಟ್ಟಿ ಬಂದಿದೆ. ಇದನ್ನು ತೊಡೆದು ಹಾಕದೇ, ಉದ್ಯೋಗ ಸೃಷ್ಟಿ ಅಸಾಧ್ಯ. ಆದರೆ ಇಲ್ಲೇ ಉದ್ಯೋಗ ಸೃಷ್ಟಿಯಾಗಬೇಕು ಎನ್ನುವುದು ಎಷ್ಟೋ ಹೆತ್ತವರ, ಪೋಷಕರ ಕನಸು. ನಮ್ಮ ಮನೆಯ ಮಕ್ಕಳು ಉದ್ಯೋಗವನ್ನರಸಿ, ಬೇರೆ ಊರುಗಳಿಗೆ ಹೋಗುವಂತಾಗಬಾರದು. ತಮ್ಮ ತಂದೆ – ತಾಯಿಯ ಜೊತೆ ನಮ್ಮ ಊರಿನಲ್ಲೇ ಉಳಿಯಬೇಕು ಎಂದರು.
ಇದೇ ಸಂದರ್ಭ ಪದ್ಮರಾಜ್ ಆರ್. ಪೂಜಾರಿ ಅವರ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಸಂಸ್ಥೆಯ ಮುಖ್ಯಸ್ಥ ಐವನ್ ಮೊಂತೆರೋ ಪ್ರಾರ್ಥಿಸಿದರು.
ಸಂಸ್ಥೆಯ ಅಧ್ಯಕ್ಷ ಡೊನಾಲ್ಡ್ ಪಿ. ಮಿನೇಜಸ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಗಿರೀಶ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು