12:23 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಫುಲ್ ಗಾಸ್ಪೆಲ್ ಪಾಸ್ಟರ್ಸ್ ಫೆಲೋಶಿಪ್’ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆಲುವಿಗಾಗಿ ವಿಶೇಷ ಪ್ರಾರ್ಥನೆ

11/04/2024, 16:12

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಸಾಮರಸ್ಯದ ಜೀವನವನ್ನು ಎದುರು ನೋಡುತ್ತಿದೆ. ಇದರಿಂದ ನಮ್ಮ ಜಿಲ್ಲೆಯಲ್ಲೇ ಉದ್ಯೋಗ ಸೃಷ್ಟಿ ಸಾಧ್ಯ ಎಂದು ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಬಲ್ಮಠದ ದಕ್ಷಿಣ ಕನ್ನಡ ಫುಲ್ ಗಾಸ್ಪೆಲ್ ಪಾಸ್ಟರ್ಸ್ ಫೆಲೋಶಿಪ್ ನಲ್ಲಿ ಅವರು ಮಾತನಾಡಿದರು.


ದಕ್ಷಿಣ ಕನ್ನಡದಲ್ಲಿ ಪ್ರೀತಿ ಹಂಚುವ ಕಾಯಕ ಕಡಿಮೆಯಾಗಿದೆ. ದ್ವೇಷಮಯ ವಾತಾವರಣವನ್ನು ಸೃಷ್ಟಿಸಲಾಗಿದೆ. ಇದರಿಂದ ಜಿಲ್ಲೆಗೆ ಕೋಮುವಾದಿ ಹಣೆಪಟ್ಟಿ ಬಂದಿದೆ. ಇದನ್ನು ತೊಡೆದು ಹಾಕದೇ, ಉದ್ಯೋಗ ಸೃಷ್ಟಿ ಅಸಾಧ್ಯ. ಆದರೆ ಇಲ್ಲೇ ಉದ್ಯೋಗ ಸೃಷ್ಟಿಯಾಗಬೇಕು ಎನ್ನುವುದು ಎಷ್ಟೋ ಹೆತ್ತವರ, ಪೋಷಕರ ಕನಸು. ನಮ್ಮ ಮನೆಯ ಮಕ್ಕಳು ಉದ್ಯೋಗವನ್ನರಸಿ, ಬೇರೆ ಊರುಗಳಿಗೆ ಹೋಗುವಂತಾಗಬಾರದು. ತಮ್ಮ ತಂದೆ – ತಾಯಿಯ ಜೊತೆ ನಮ್ಮ ಊರಿನಲ್ಲೇ ಉಳಿಯಬೇಕು ಎಂದರು.
ಇದೇ ಸಂದರ್ಭ ಪದ್ಮರಾಜ್ ಆರ್. ಪೂಜಾರಿ ಅವರ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಸಂಸ್ಥೆಯ ಮುಖ್ಯಸ್ಥ ಐವನ್ ಮೊಂತೆರೋ ಪ್ರಾರ್ಥಿಸಿದರು.
ಸಂಸ್ಥೆಯ ಅಧ್ಯಕ್ಷ ಡೊನಾಲ್ಡ್ ಪಿ. ಮಿನೇಜಸ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಗಿರೀಶ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು