3:39 AM Monday3 - November 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:…

ಇತ್ತೀಚಿನ ಸುದ್ದಿ

ಪೂನಾ: ಕಾರ್ಕಳ ಮೂಲದ ಹೊಟೇಲ್ ಮಾಲೀಕನ ಹತ್ಯೆ; ಸಿಬ್ಬಂದಿಯಿಂದಲೇ ದುಷ್ಕೃತ್ಯ

27/08/2025, 09:41

ಪೂನಾ(reporterkarnataka.com): ಮಹಾರಾಷ್ಟ್ರದ ಪೂನಾದಲ್ಲಿ ಮಂಗಳವಾರ ರಾತ್ರಿ ನಡೆದ ಭೀಕರ ಘಟನೆಗೆ ಕಾರ್ಕಳ ಮೂಲದ ಹೋಟೇಲ್ ಮಾಲೀಕ ಬಲಿಯಾದರು.
ಹೋಟೇಲ್ ಸಿಬ್ಬಂದಿಯೊಬ್ಬನು ಮದ್ಯಪಾನ ಮಾಡಿ ಕೆಲಸ ಮಾಡುತ್ತಿದ್ದ ಕಾರಣಕ್ಕೆ ಗದರಿಸಿದ ಮಾಲೀಕನನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಹತ್ಯೆಯಾದವರು ಕಾರ್ಕಳ ತಾಲೂಕಿನ ಎಣ್ಣೆಹೊಳೆ ಕುಮೇರುಮನೆ ನಿವಾಸಿ ಸಂತೋಷ್ ಶೆಟ್ಟಿ (46) ಎಂದು ಗುರುತಿಸಲಾಗಿದೆ. ಉತ್ತರ ಪ್ರದೇಶ ಮೂಲದ ಹೋಟೇಲ್ ಸಿಬ್ಬಂದಿ ಕೆಲಸದ ಸಮಯದಲ್ಲಿ ಮದ್ಯಪಾನ ಮಾಡಿದ್ದಕ್ಕೆ ಸಂತೋಷ್ ಶೆಟ್ಟಿ ಬುದ್ಧಿವಾದ ಹೇಳಿದ ವೇಳೆ, ಆಕ್ರೋಶಗೊಂಡ ಸಿಬ್ಬಂದಿ ಕಿಚನ್‌ನಿಂದ ಕತ್ತಿಯಿಂದ ಶೆಟ್ಟಿಯವರ ಹತ್ಯೆ ಮಾಡಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಘಟನೆ ಮಂಗಳವಾರ ರಾತ್ರಿ ಸುಮಾರು 10 ಗಂಟೆಗೆ ನಡೆದಿದೆ. ಈ ಶವವನ್ನು ಅಂತ್ಯಕ್ರಿಯೆಗಾಗಿ ಹುಟ್ಟೂರು ಎಣ್ಣೆಹೊಳೆಗೆ ತರಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು