5:18 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು…

ಇತ್ತೀಚಿನ ಸುದ್ದಿ

ಪುನೀತ್‌ ರಾಜ್‌ ಕುಮಾರ್‌‌ ನಾಡಿಗೆ ನೀಡಿದ ಸೇವೆ ಸ್ಮರಣೀಯ: ಭೋಜರಾಜ್ ವಾಮಂಜೂರು

06/12/2021, 20:00

ಕಾರ್ಕಳ(reporterkarnataka.com): ನಮ್ಮೆಲ್ಲರ ಅಚ್ಚುಮೆಚ್ಚಿನ ಅಪ್ಪು ನಿಧನರಾಗಿ ತಿಂಗಳು ಒಂದು ಕಳೆದರೂ ಇಡೀ ನಾಡು ಶೋಕದಿಂದಲೇ ಇದೆ. ಪುನೀತ್‌ ರಾಜ್‌ ಕುಮಾರ್‌‌ ನಾಡಿಗೆ ನೀಡಿದ ಸೇವೆ ಸ್ಮರಣೀಯವಾಗಿದ್ದು, ಮಾದರಿಯಾಗಿದೆ ಎಂದು ರಂಗಭೂಮಿ ಕಲಾವಿದ,  ಚಿತ್ರನಟ ಭೋಜರಾಜ್‌ ವಾಮಂಜೂರು ಹೇಳಿದರು.

ಅವರು ಸೋಮವಾರ ಪೆರ್ವಾಜೆ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ನಡೆದ ಸ್ಮರಣಾಂಜಲಿ ಕಾರ್ಯಕ್ರಮದಲ್ಲಿ ಪುನೀತ್‌ ಹಾಗೂ ಪ್ರದೀಪ್‌ ಕೋಟ್ಯಾನ್‌ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಬಳಿಕ ಮಾತನಾಡಿದರು. 

ಗೇರು ನಿಗಮದ ಅ‍ಧ್ಯಕ್ಷ ಮಣಿರಾಜ್‌ ಶೆಟ್ಟಿ, ಉದ್ಯಮಿ ಬಿ. ಕೃಷ್ಣಮೂರ್ತಿ ಪ್ರದೀಪ್‌ ಅವರೊಂದಿಗಿನ ರಾಜಕೀಯೇತರ ಸಂಬಂಧ, ಒಡನಾಟದ ಕುರಿತು ಮೆಲುಕು ಹಾಕಿದರು. 

ಅ‍ಧ್ಯಕ್ಷತೆ ವಹಿಸಿ ಮಾತನಾಡಿದ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಡಿ.ಆರ್.‌ ರಾಜು, ಪುನೀತ್‌ ರಾಜ್‌ಕುಮಾರ್‌ ಕೇವಲ ಓರ್ವ ನಟನಾಗಿ ಗುರುಸಿಕೊಂಡಿದ್ದಲ್ಲ. ತನ್ನ ಆದರ್ಶ ವ್ಯಕ್ತಿತ್ವ, ನಿಸ್ವಾರ್ಥ, ನಿಶ್ಕಲ್ಮಶ ಸಮಾಜ ಸೇವೆಯಿಂದಲೇ ಕನ್ನಡಿಗರ ಮನೆಮನದಲ್ಲಿ ನೆಲೆಸಿದ್ದಾರೆ ಎಂದರು. 

ಪುರಸಭೆ ಮಾಜಿ ಅ‍ಧ್ಯಕ್ಷ ಪ್ರದೀಪ್‌ ಕೋಟ್ಯಾನ್‌ ಓರ್ವ ಸ್ನೇಹಜೀವಿ. ಕಾರ್ಕಳ ನಗರಕ್ಕೆ ಅವರ  ಕೊಡುಗೆ ಅಪಾರವಾಗಿತ್ತು ಎಂದರು. 

ನೇತ್ರ ದಾನ: ರಾಜ್‌ಕುಮಾರ್‌ ಕುಟುಂಬ ನೇತ್ರದಾನದಿಂದ ಪ್ರೇರಣೆಗೊಂಡ ನಾನು, ನನ್ನ ಪತ್ನಿ ನೇತ್ರದಾನಕ್ಕೆ ಮುಂದಾಗಿದ್ದೇವೆ. ಮುಂದಿನ ದಿನಗಳಲ್ಲಿ ಕಾರ್ಕಳದ ಸಂಘ- ಸಂಸ್ಥೆಗಳ ಸಹಕಾರದೊಂದಿಗೆ ನೇತ್ರ ದಾನ ನೋಂದಣಿ ನಡೆಸುವ ಇರಾದೆಯೆಂದು ರಾಜು ಅವರು ತಿಳಿಸಿದರು. 

ಪುರಸಭಾ ಅಧ್ಯಕ್ಷೆ ಸುಮಾ ಕೇಶವ್‌, ಗೆಜ್ಜೆಗಿರಿ ನಂದನಪಿತ್ತಿಲ್‌ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌ ಚಿಲಿಂಬಿ, ಪ್ರಭಾಕರ್‌ ಬಂಗೇರ, ಪ್ರವೀಣ್‌ ಸುವರ್ಣ ಉಪಸ್ಥಿತರಿದ್ದರು. 

ನವೀನ್‌ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಬಳಿಕ ರಕ್ಷಿತ್‌ ಕೆ.ಎಂ. ಬಳಗದವರು ಸ್ವರನಮನ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು