3:49 AM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಪುರುಷನ ಜತೆಗಿದ್ದ ಮಹಿಳೆ ಸಂಬಂಧ ಕೆಟ್ಟಾಗ ಅತ್ಯಾಚಾರವಾಯಿತು ಅನ್ನೋ ಹಾಗಿಲ್ಲ: ಸುಪ್ರೀಂಕೋರ್ಟ್

15/07/2022, 23:15

ಹೊಸದಿಲ್ಲಿ(reporterkarnataka.com): ಮಹಿಳೆ ತಾನು ಇಷ್ಟಪಟ್ಟು ಪುರುಷನ ಜೊತೆಗಿದ್ದು,ಆ ಬಳಿಕ ಸಂಬಂಧ ನಡುವೆ ವೈಮನಸು ಉಂಟಾಗಿ ದೂರವಾದಾಗ ಅತ್ಯಾಚಾರವಾಯಿತು ಎಂದು ದೂರು ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಆರೋಪಿ ಅನ್ಸಾರ್ ಮೊಹಮ್ಮದ್ ಎಂಬಾತ ತಮ್ಮ ವಿರುದ್ಧ ಸಲ್ಲಿಕೆ ಆಗಿರುವ ಅತ್ಯಾಚಾರ ಆರೋಪದ ಕುರಿತಂತೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನಿಗೆ ಸಂಬಂಧಿತ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಗುಪ್ತ ಮತ್ತು ವಿಕ್ರಮ್​ನಾಥ್ ಅವರಿದ್ದ ಪೀಠ, ಮೇಲಿನ ತೀರ್ಪು ನೀಡಿ, ಜಾಮೀನು ಮಂಜೂರು ಮಾಡಿದೆ.

ದೂರುದಾರ ಮಹಿಳೆಯು ಅನ್ಸಾರ್​ ಮೊಹಮ್ಮದ್​ನೊಂದಿಗೆ ಇಷ್ಟಪಟ್ಟೇ ಜತೆಗಿದ್ದರು. ಆದರೆ ಈಗ ಇಬ್ಬರ ನಡುವಿನ ಸಂಬಂಧ ಹದೆಗೆಟ್ಟಿದೆ ಎಂಬ ಕಾರಣಕ್ಕೆ ಸೆಕ್ಷನ್​ 376(2)ರ ಪ್ರಕಾರ ಎಫ್​ಐಆರ್ ದಾಖಲು ಮಾಡಲಾಗದು ಎಂದು ಪೀಠ ಅಭಿಪ್ರಾಯಪಟ್ಟಿದೆ. ಮಾತ್ರವಲ್ಲ, ಆರೋಪಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿ ರಾಜಸ್ಥಾನ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ತಳ್ಳಿಹಾಕಿದೆ.

25 ವರ್ಷದ ಮಹಿಳೆ ಈ ಪ್ರಕರಣದಲ್ಲಿ ದೂರುದಾರರಾಗಿದ್ದು, ಅನ್ಸಾರ್ ಜತೆ ನಾಲ್ಕು ವರ್ಷದಿಂದ ಸಂಬಂಧ ಹೊಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು