9:10 AM Saturday2 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಪುರುಷನ ಜತೆಗಿದ್ದ ಮಹಿಳೆ ಸಂಬಂಧ ಕೆಟ್ಟಾಗ ಅತ್ಯಾಚಾರವಾಯಿತು ಅನ್ನೋ ಹಾಗಿಲ್ಲ: ಸುಪ್ರೀಂಕೋರ್ಟ್

15/07/2022, 23:15

ಹೊಸದಿಲ್ಲಿ(reporterkarnataka.com): ಮಹಿಳೆ ತಾನು ಇಷ್ಟಪಟ್ಟು ಪುರುಷನ ಜೊತೆಗಿದ್ದು,ಆ ಬಳಿಕ ಸಂಬಂಧ ನಡುವೆ ವೈಮನಸು ಉಂಟಾಗಿ ದೂರವಾದಾಗ ಅತ್ಯಾಚಾರವಾಯಿತು ಎಂದು ದೂರು ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಆರೋಪಿ ಅನ್ಸಾರ್ ಮೊಹಮ್ಮದ್ ಎಂಬಾತ ತಮ್ಮ ವಿರುದ್ಧ ಸಲ್ಲಿಕೆ ಆಗಿರುವ ಅತ್ಯಾಚಾರ ಆರೋಪದ ಕುರಿತಂತೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನಿಗೆ ಸಂಬಂಧಿತ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಗುಪ್ತ ಮತ್ತು ವಿಕ್ರಮ್​ನಾಥ್ ಅವರಿದ್ದ ಪೀಠ, ಮೇಲಿನ ತೀರ್ಪು ನೀಡಿ, ಜಾಮೀನು ಮಂಜೂರು ಮಾಡಿದೆ.

ದೂರುದಾರ ಮಹಿಳೆಯು ಅನ್ಸಾರ್​ ಮೊಹಮ್ಮದ್​ನೊಂದಿಗೆ ಇಷ್ಟಪಟ್ಟೇ ಜತೆಗಿದ್ದರು. ಆದರೆ ಈಗ ಇಬ್ಬರ ನಡುವಿನ ಸಂಬಂಧ ಹದೆಗೆಟ್ಟಿದೆ ಎಂಬ ಕಾರಣಕ್ಕೆ ಸೆಕ್ಷನ್​ 376(2)ರ ಪ್ರಕಾರ ಎಫ್​ಐಆರ್ ದಾಖಲು ಮಾಡಲಾಗದು ಎಂದು ಪೀಠ ಅಭಿಪ್ರಾಯಪಟ್ಟಿದೆ. ಮಾತ್ರವಲ್ಲ, ಆರೋಪಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿ ರಾಜಸ್ಥಾನ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ತಳ್ಳಿಹಾಕಿದೆ.

25 ವರ್ಷದ ಮಹಿಳೆ ಈ ಪ್ರಕರಣದಲ್ಲಿ ದೂರುದಾರರಾಗಿದ್ದು, ಅನ್ಸಾರ್ ಜತೆ ನಾಲ್ಕು ವರ್ಷದಿಂದ ಸಂಬಂಧ ಹೊಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು