9:58 PM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಪುಷ್ಪ ಸಿನಿಮಾದ ಸ್ಟೈ ಲ್ ನಲ್ಲಿ ಬೆಂಗಳೂರಿಗೆ ಗಾಂಜಾ ಸಪ್ಲೈ: ಮಂಗಳೂರು ಮೂಲದ ಇಬ್ಬರ ಬಂಧನ

24/07/2022, 19:23

ಮಂಗಳೂರು(reporterkarnataka.com): ಪುಷ್ಪ ಸಿನಿಮಾ ಸ್ಟೈಲ್‌ನಲ್ಲಿ ಬೊಲೇರೋ ವಾಹನದಲ್ಲಿ ಸುಮಾರು 1 ಕೋಟಿ ರೂ. ಮೌಲ್ಯದ ಗಾಂಜಾ ಸಾಗಾಟ ಮಾಡುತ್ತಿದ್ದ 7 ಮಂದಿ ಆರೋಪಿಗಳನ್ನು ಬೆಂಗಳೂರಿನ ಬೇಗೂರು ಪೊಲೀಸರು ಬಂಧಿಸಿದ್ದಾರೆ.

ಬೊಲೇರೋ ಗೂಡ್ಸ್ ವಾಹನದ ಲಗೇಜ್ ಇಡುವ ಪ್ಲಾಟ್‌ಫಾರಂ ಕೆಳಭಾಗದಲ್ಲಿ ದೊಡ್ಡ ಬಾಕ್ಸ್ ಮಾಡಿಕೊಂಡು ಅದರಲ್ಲಿ ಗಾಂಜಾ ಅಡಗಿಸಿಟ್ಟು ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಸಾಗಾಟ ಮಾಡುತ್ತಿದ್ದರು.

ಬಂಧಿತರಲ್ಲಿ ಇಬ್ಬರು ಮಂಗಳೂರು ಮೂಲದವರೆಂದು ತಿಳಿದು ಬಂದಿದೆ. ಬಂಧಿತರಿಂದ 1 ಕೋಟಿ ರೂ ಮೌಲ್ಯದ 175 ಕೆ.ಜಿ. ಗಾಂಜಾ ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಅರವಿಂದ್, ಪವನ್, ಪ್ರಭು, ಪ್ರಸಾದ್, ಪತ್ತಿ ಸಾಯಿಚಂದ್ರ ಪ್ರಕಾಶ್, ಅಮ್ಮದ್ ಇತಿಯಾರ್, ನಜೀಮ್ ಎಂದು ಗುರುತಿಸಲಾಗಿದೆ.

ಬಂಧಿತರಲ್ಲಿ ಅಮ್ಮದ್ ಇತಿಯಾರ್, ನಜೀಮ್ ಮಂಗಳೂರು ಮೂಲದವರು, ಆ ಪೈಕಿ ನಜೀಂ ರೌಡಿಶೀಟರ್ ಆಗಿದ್ದು, ಸದ್ಯ ಬಾಡಿ ವಾರಂಟ್ ಮೂಲಕ ಕೊಣಾಜೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಇವರು ಬೆಂಗಳೂರಿಗೆ ತಂದು ಅಲ್ಲಿಂದ ಕಾಲೇಜು, ಪಬ್, ಕಬ್ 3 ಗಳಿಗೆ ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಇದೀಗ ಆರೋಪಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆಯನ್ನು ಮಾಡುತ್ತಿದ್ದಾರೆ. ಪುಷ್ಪ ಸಿನಿಮಾದಿಂದ ಪ್ರೇರಣೆಗೊಂಡು ಗಾಂಜಾ ಸಾಗಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು