10:20 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಪುಷ್ಪ ಸಿನಿಮಾದ ಸ್ಟೈ ಲ್ ನಲ್ಲಿ ಬೆಂಗಳೂರಿಗೆ ಗಾಂಜಾ ಸಪ್ಲೈ: ಮಂಗಳೂರು ಮೂಲದ ಇಬ್ಬರ ಬಂಧನ

24/07/2022, 19:23

ಮಂಗಳೂರು(reporterkarnataka.com): ಪುಷ್ಪ ಸಿನಿಮಾ ಸ್ಟೈಲ್‌ನಲ್ಲಿ ಬೊಲೇರೋ ವಾಹನದಲ್ಲಿ ಸುಮಾರು 1 ಕೋಟಿ ರೂ. ಮೌಲ್ಯದ ಗಾಂಜಾ ಸಾಗಾಟ ಮಾಡುತ್ತಿದ್ದ 7 ಮಂದಿ ಆರೋಪಿಗಳನ್ನು ಬೆಂಗಳೂರಿನ ಬೇಗೂರು ಪೊಲೀಸರು ಬಂಧಿಸಿದ್ದಾರೆ.

ಬೊಲೇರೋ ಗೂಡ್ಸ್ ವಾಹನದ ಲಗೇಜ್ ಇಡುವ ಪ್ಲಾಟ್‌ಫಾರಂ ಕೆಳಭಾಗದಲ್ಲಿ ದೊಡ್ಡ ಬಾಕ್ಸ್ ಮಾಡಿಕೊಂಡು ಅದರಲ್ಲಿ ಗಾಂಜಾ ಅಡಗಿಸಿಟ್ಟು ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಸಾಗಾಟ ಮಾಡುತ್ತಿದ್ದರು.

ಬಂಧಿತರಲ್ಲಿ ಇಬ್ಬರು ಮಂಗಳೂರು ಮೂಲದವರೆಂದು ತಿಳಿದು ಬಂದಿದೆ. ಬಂಧಿತರಿಂದ 1 ಕೋಟಿ ರೂ ಮೌಲ್ಯದ 175 ಕೆ.ಜಿ. ಗಾಂಜಾ ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಅರವಿಂದ್, ಪವನ್, ಪ್ರಭು, ಪ್ರಸಾದ್, ಪತ್ತಿ ಸಾಯಿಚಂದ್ರ ಪ್ರಕಾಶ್, ಅಮ್ಮದ್ ಇತಿಯಾರ್, ನಜೀಮ್ ಎಂದು ಗುರುತಿಸಲಾಗಿದೆ.

ಬಂಧಿತರಲ್ಲಿ ಅಮ್ಮದ್ ಇತಿಯಾರ್, ನಜೀಮ್ ಮಂಗಳೂರು ಮೂಲದವರು, ಆ ಪೈಕಿ ನಜೀಂ ರೌಡಿಶೀಟರ್ ಆಗಿದ್ದು, ಸದ್ಯ ಬಾಡಿ ವಾರಂಟ್ ಮೂಲಕ ಕೊಣಾಜೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಇವರು ಬೆಂಗಳೂರಿಗೆ ತಂದು ಅಲ್ಲಿಂದ ಕಾಲೇಜು, ಪಬ್, ಕಬ್ 3 ಗಳಿಗೆ ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಇದೀಗ ಆರೋಪಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆಯನ್ನು ಮಾಡುತ್ತಿದ್ದಾರೆ. ಪುಷ್ಪ ಸಿನಿಮಾದಿಂದ ಪ್ರೇರಣೆಗೊಂಡು ಗಾಂಜಾ ಸಾಗಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು