11:42 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಪುಷ್ಯ ಮಳೆಯ ಅಬ್ಬರ: ಅಪಾಯ ಮಟ್ಟ ಮೀರಿ ಹರಿಯುತ್ತಿರುವ ತುಂಗಾ ನದಿ; 4 ಬಾರಿ ಬಾಗಿನ ಸಮರ್ಪಿಸಿದರೂ ರಾಮ ಮಂಟಪ ಮುಳುಗಡೆ

30/07/2024, 21:41

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.ಕಂ

ಪುಷ್ಯ ಮಳೆಯ ಅಬ್ಬರಕ್ಕೆ ತುಂಗಾನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು ಹಲವೆಡೆ ರಸ್ತೆ ಸಂಪರ್ಕ ಕಡಿತವಾಗಿದೆ. ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಐತಿಹಾಸಿಕ ರಾಮಮಂಟಪ ಮುಳುಗಡೆ ಆಗಿದೆ.
ನಿರಂತರ ಸುರಿಯುತ್ತಿರುವ ಮಳೆಯಿಂದ ನೀರು ಹೆಚ್ಚಾಗುವ
ಸಾಧ್ಯತೆ ಇದೆ.ನದಿ ಪಾತ್ರದಲ್ಲಿ ವಾಸಿಸುವ ಜನರಿಗೆ ಈಗಾಗಲೇ ಮುನ್ನೆಚ್ಚರಿಕೆಯನ್ನು ನೀಡಲಾಗಿದ್ದು ತಗ್ಗು ಪ್ರದೇಶದ ಮನೆಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಪ್ರದೇಶವಾದ ಸ್ಥಳಗಳಿಗೆ ಅಧಿಕಾರಿಗಳು ಕಳುಹಿಸಬೇಕಿದೆ.
*ತಲೆಕೆಳಗಾದ ಪ್ರತೀತಿ:*
ಪ್ರತಿಯೊಂದು ಬಾರಿ ಬಾಗಿನ ಬಿಟ್ಟ ನಂತರ ಮಳೆ ಕಡಿಮೆಯಾಗಿ ನದಿಯ ನೀರಿನ ಮಟ್ಟ ಕೂಡ ಕಡಿಮೆ ಆಗುತ್ತದೆ ಎಂಬ ಪ್ರತೀತಿ ಇದೆ. ಆದರೆ ಈ ಬಾರಿ ಆ ಪ್ರತೀತಿ ತಲೆ ಕೆಳಗಾಗಿದೆ.ಅದರಲ್ಲೂ ಈ ಬಾರಿ ನಾಲ್ಕು ಬಾರಿ ತುಂಗಾ ನದಿಗೆ ಬಾಗಿನ ಅರ್ಪಿಸಲಾಗಿತ್ತು. ಆದರೂ ಬಾಗಿನ ಅರ್ಪಿಸಿದ ನಂತರ ರಾಮಮಂಟಪ ಮುಳುಗಿ ಹೊಸ ಇತಿಹಾಸ ಬರೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು