9:27 AM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಪುಷ್ಯ ಮಳೆಯ ಅಬ್ಬರ: ಅಪಾಯ ಮಟ್ಟ ಮೀರಿ ಹರಿಯುತ್ತಿರುವ ತುಂಗಾ ನದಿ; 4 ಬಾರಿ ಬಾಗಿನ ಸಮರ್ಪಿಸಿದರೂ ರಾಮ ಮಂಟಪ ಮುಳುಗಡೆ

30/07/2024, 21:41

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.ಕಂ

ಪುಷ್ಯ ಮಳೆಯ ಅಬ್ಬರಕ್ಕೆ ತುಂಗಾನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು ಹಲವೆಡೆ ರಸ್ತೆ ಸಂಪರ್ಕ ಕಡಿತವಾಗಿದೆ. ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಐತಿಹಾಸಿಕ ರಾಮಮಂಟಪ ಮುಳುಗಡೆ ಆಗಿದೆ.
ನಿರಂತರ ಸುರಿಯುತ್ತಿರುವ ಮಳೆಯಿಂದ ನೀರು ಹೆಚ್ಚಾಗುವ
ಸಾಧ್ಯತೆ ಇದೆ.ನದಿ ಪಾತ್ರದಲ್ಲಿ ವಾಸಿಸುವ ಜನರಿಗೆ ಈಗಾಗಲೇ ಮುನ್ನೆಚ್ಚರಿಕೆಯನ್ನು ನೀಡಲಾಗಿದ್ದು ತಗ್ಗು ಪ್ರದೇಶದ ಮನೆಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಪ್ರದೇಶವಾದ ಸ್ಥಳಗಳಿಗೆ ಅಧಿಕಾರಿಗಳು ಕಳುಹಿಸಬೇಕಿದೆ.
*ತಲೆಕೆಳಗಾದ ಪ್ರತೀತಿ:*
ಪ್ರತಿಯೊಂದು ಬಾರಿ ಬಾಗಿನ ಬಿಟ್ಟ ನಂತರ ಮಳೆ ಕಡಿಮೆಯಾಗಿ ನದಿಯ ನೀರಿನ ಮಟ್ಟ ಕೂಡ ಕಡಿಮೆ ಆಗುತ್ತದೆ ಎಂಬ ಪ್ರತೀತಿ ಇದೆ. ಆದರೆ ಈ ಬಾರಿ ಆ ಪ್ರತೀತಿ ತಲೆ ಕೆಳಗಾಗಿದೆ.ಅದರಲ್ಲೂ ಈ ಬಾರಿ ನಾಲ್ಕು ಬಾರಿ ತುಂಗಾ ನದಿಗೆ ಬಾಗಿನ ಅರ್ಪಿಸಲಾಗಿತ್ತು. ಆದರೂ ಬಾಗಿನ ಅರ್ಪಿಸಿದ ನಂತರ ರಾಮಮಂಟಪ ಮುಳುಗಿ ಹೊಸ ಇತಿಹಾಸ ಬರೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು