7:23 PM Wednesday13 - May 2026
ಬ್ರೇಕಿಂಗ್ ನ್ಯೂಸ್
ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ…

ಇತ್ತೀಚಿನ ಸುದ್ದಿ

ಪುಷ್ಯ ಮಳೆಯ ಅಬ್ಬರ: ಅಪಾಯ ಮಟ್ಟ ಮೀರಿ ಹರಿಯುತ್ತಿರುವ ತುಂಗಾ ನದಿ; 4 ಬಾರಿ ಬಾಗಿನ ಸಮರ್ಪಿಸಿದರೂ ರಾಮ ಮಂಟಪ ಮುಳುಗಡೆ

30/07/2024, 21:41

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.ಕಂ

ಪುಷ್ಯ ಮಳೆಯ ಅಬ್ಬರಕ್ಕೆ ತುಂಗಾನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು ಹಲವೆಡೆ ರಸ್ತೆ ಸಂಪರ್ಕ ಕಡಿತವಾಗಿದೆ. ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಐತಿಹಾಸಿಕ ರಾಮಮಂಟಪ ಮುಳುಗಡೆ ಆಗಿದೆ.
ನಿರಂತರ ಸುರಿಯುತ್ತಿರುವ ಮಳೆಯಿಂದ ನೀರು ಹೆಚ್ಚಾಗುವ
ಸಾಧ್ಯತೆ ಇದೆ.ನದಿ ಪಾತ್ರದಲ್ಲಿ ವಾಸಿಸುವ ಜನರಿಗೆ ಈಗಾಗಲೇ ಮುನ್ನೆಚ್ಚರಿಕೆಯನ್ನು ನೀಡಲಾಗಿದ್ದು ತಗ್ಗು ಪ್ರದೇಶದ ಮನೆಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಪ್ರದೇಶವಾದ ಸ್ಥಳಗಳಿಗೆ ಅಧಿಕಾರಿಗಳು ಕಳುಹಿಸಬೇಕಿದೆ.
*ತಲೆಕೆಳಗಾದ ಪ್ರತೀತಿ:*
ಪ್ರತಿಯೊಂದು ಬಾರಿ ಬಾಗಿನ ಬಿಟ್ಟ ನಂತರ ಮಳೆ ಕಡಿಮೆಯಾಗಿ ನದಿಯ ನೀರಿನ ಮಟ್ಟ ಕೂಡ ಕಡಿಮೆ ಆಗುತ್ತದೆ ಎಂಬ ಪ್ರತೀತಿ ಇದೆ. ಆದರೆ ಈ ಬಾರಿ ಆ ಪ್ರತೀತಿ ತಲೆ ಕೆಳಗಾಗಿದೆ.ಅದರಲ್ಲೂ ಈ ಬಾರಿ ನಾಲ್ಕು ಬಾರಿ ತುಂಗಾ ನದಿಗೆ ಬಾಗಿನ ಅರ್ಪಿಸಲಾಗಿತ್ತು. ಆದರೂ ಬಾಗಿನ ಅರ್ಪಿಸಿದ ನಂತರ ರಾಮಮಂಟಪ ಮುಳುಗಿ ಹೊಸ ಇತಿಹಾಸ ಬರೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು