11:21 AM Friday24 - April 2026
ಬ್ರೇಕಿಂಗ್ ನ್ಯೂಸ್
ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ…

ಇತ್ತೀಚಿನ ಸುದ್ದಿ

ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ: ಮಕ್ಕಳ ಹಿತದೃಷ್ಟಿಯಿಂದ ಸಾಮಾಜಿಕ ಜಾಲತಾಣ ನಿಯಂತ್ರಣಕ್ಕೆ ಸಚಿವ ಮಧು ಬಂಗಾರಪ್ಪ ಚಿಂತನೆ

26/02/2026, 23:07

ಬೆಂಗಳೂರು(reporterkarnataka.com): ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳನ್ನು (Social Media) ನಿಷೇಧಿಸುವ ಕುರಿತು ರಾಜ್ಯ ಸರ್ಕಾರ ಆಲೋಚಿಸುತ್ತಿದ್ದು, ಈ ನಿಟ್ಟಿನಲ್ಲಿ ಮಕ್ಕಳು, ಪೋಷಕರು ಮತ್ತು ತಜ್ಞರ ಅಭಿಪ್ರಾಯ ಪಡೆದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
ಗುರುವಾರ ಬೆಂಗಳೂರಿನ ಜವಾಹರಲಾಲ್ ನೆಹರು ತಾರಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಪೋಷಕರು ಮೊದಲು ಎಚ್ಚೆತ್ತುಕೊಳ್ಳಬೇಕು ಮಕ್ಕಳು ಮೊಬೈಲ್ ಚಟಕ್ಕೆ ಬೀಳುವಲ್ಲಿ ಪೋಷಕರ ಪಾತ್ರದ ಬಗ್ಗೆ ಬೇಸರ ವ್ಯಕ್ತಪಡಿಸಿದ ಸಚಿವರು, “ಇವತ್ತಿನ ವ್ಯವಸ್ಥೆಯಲ್ಲಿ ಮಗು ಅಳುತ್ತಿದೆ ಅಥವಾ ಸುಮ್ಮನಿರಲಿ ಎಂದು ಪೋಷಕರೇ ತಮ್ಮ ಕೈಯಾರೆ ಮೊಬೈಲ್ ಕೊಡುತ್ತಾರೆ. ಸಮಸ್ಯೆಯ ಮೂಲ ಇರುವುದೇ ಅಲ್ಲಿ. ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳಿಂದ ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬುದು ಕೇವಲ ನಮ್ಮ ರಾಜ್ಯದ್ದಲ್ಲ, ಇಡೀ ದೇಶದ ಸಮಸ್ಯೆಯಾಗಿದೆ,” ಎಂದರು.

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಸೂಚನೆಯಂತೆ ‘ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ’ ಎಂಬ ಆಂದೋಲನವನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದ ಅವರು, “ಮುಖ್ಯಮಂತ್ರಿಗಳು ಈಗಾಗಲೇ ಎರಡು-ಮೂರು ಬಾರಿ ಈ ಬಗ್ಗೆ ಎಚ್ಚರಿಸಿದ್ದಾರೆ. ಇದನ್ನು ಕೇವಲ ತರಗತಿಗಳಿಗೆ ಸೀಮಿತಗೊಳಿಸದೆ, ಒಂದು ಜವಾಬ್ದಾರಿಯುತ ತೀರ್ಮಾನವಾಗಿ ಜಾರಿಗೆ ತರಬೇಕಿದೆ. ಈ ಕುರಿತು ವಿಸ್ತೃತ ಚರ್ಚೆಯ ಅಗತ್ಯವಿದೆ,” ಎಂದು ಹೇಳಿದರು.

ಅಭಿಪ್ರಾಯ ಸಂಗ್ರಹದ ನಂತರ ತೀರ್ಮಾನ
ಮಕ್ಕಳ ಅಭಿಪ್ರಾಯವನ್ನು ಹೇಗೆ ಪಡೆಯಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು:

* ಯಾವುದೇ ತೀರ್ಮಾನ ತೆಗೆದುಕೊಂಡರು ಅದು ಮಕ್ಕಳ ಹಿತದೃಷ್ಟಿಯಿಂದಲೇ ಇರುತ್ತದೆ.

* ಕೇವಲ ಮಕ್ಕಳಷ್ಟೇ ಅಲ್ಲ, ಶಿಕ್ಷಕರು ಮತ್ತು ಪೋಷಕರ ಜೊತೆಗೂ ಚರ್ಚೆ ಮಾಡಬೇಕಿದೆ.

* ಪೋಷಕರು ಈ ವಿಷಯದಲ್ಲಿ ಹೆಚ್ಚಿನ ಜವಾಬ್ದಾರಿ ತೋರಬೇಕು.

ಸದ್ಯಕ್ಕೆ ಈ ವಿಚಾರ ಚರ್ಚೆಯ ಹಂತದಲ್ಲಿದ್ದು, ಮುಖ್ಯಮಂತ್ರಿಗಳ ಮಾರ್ಗದರ್ಶನದಲ್ಲಿ ಶೀಘ್ರವೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು