1:39 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಪುಟಾಣಿಗಳಿಗೆ ಗಂಟೆ ಬಾರಿಸುವ ಸಮಯ: ದಸರಾ ರಜೆ ಬಳಿಕ 1ರಿಂದ 5ನೇ ತರಗತಿ ಆರಂಭ? ಅ.21ರಿಂದ ಸಾಧ್ಯತೆ

28/09/2021, 08:48

ಬೆಂಗಳೂರು(reporterkarnataka.com):

ದಸರಾ ರಜೆ ಮುಗಿದ ನಂತರ 1ರಿಂದ 5ನೇ ತರಗತಿ ಶಾಲೆ ಆರಂಭಿಸಲಾಗುವುದು. ಅಕ್ಟೋಬರ್ 20ಕ್ಕೆ ದಸರಾ ರಜೆ ಮುಕ್ತಾಯವಾಗಲಿದೆ. ಅಕ್ಟೋಬರ್ 21 ರ ನಂತರ ಭೌತಿಕ ತರಗತಿಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ.

ಅಕ್ಟೋಬರ್ 10 ರಿಂದ ಮಧ್ಯಂತರ ಅಥವಾ ದಸರಾ ರಜೆ ಆರಂಭವಾಗಲಿದ್ದು, ಅಕ್ಟೋಬರ್ 20 ಕ್ಕೆ ಮುಕ್ತಾಯವಾಗಲಿದೆ. ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ. ಹೀಗಾಗಿ ಶಿಕ್ಷಣ ತಜ್ಞರು, ಶಾಲೆಗಳ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು, ಆರೋಗ್ಯ, ಶಿಕ್ಷಣ, ವೈದ್ಯಕೀಯ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ 1ರಿಂದ 5ನೇ ತರಗತಿಗಳನ್ನು ಆರಂಭಿಸಲು ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ. ಖಾಸಗಿ ಶಾಲೆಗಳಲ್ಲಿ 1ರಿಂದ 5ನೇ ತರಗತಿ ಆರಂಭಿಸುವ ಬಗ್ಗೆ ಅಭಿಪ್ರಾಯ ಪಡೆಯಲಾಗುತ್ತಿದೆ ಎನ್ನಲಾಗಿದೆ. ಅಕ್ಟೋಬರ್ 20ಕ್ಕೆ ಮಧ್ಯಂತರ ರಜೆ ಮುಗಿದ ನಂತರ 1ರಿಂದ 5ನೇ ತರಗತಿ ಆರಂಭಿಸುವ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು