12:23 PM Thursday17 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ಪುಟಾಣಿಗಳಿಂದಲೇ ಮಕರ ಸಂಕ್ರಮಣ ಆಚರಣೆ: ಶುಭ ಕೋರಿ ಸಾರ್ವಜನಿಕರ ಮನಗೆದ್ದ ಜಾಣೆಯರು

16/01/2022, 17:10

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಶ್ರೀಪೇಟೆಬಸವೇಶ್ವರ ನಗರದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು, ಮಕ್ಕಳು ತುಂಬಾ ವಿಶಿಷ್ಟವಾಗಿ ಆಚರಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರ‍ಾಗಿದ್ದಾರೆ.


ಬೆಳ್ಳಂಬೆಳಿಗ್ಗೆ ದೈನಂದಿನ ಕಾರ್ಯಗಳನ್ನು ಪೂರೈಸಿ ಶುಭ್ರವಾದ ಧಿರಿಸುಗಳನ್ನು ಧರಿಸಿದ ಮಕ್ಕಳು,ತಮ್ಮ ತಮ್ಮ ಮನೆಗಳಿಂದ ಸಕ್ಕರೆ ಉರಿದ ಕಡಲೆ ಹಾಗೂ ಎಳ್ಳು ಮಿಶ್ರಿತ ಅಥವಾ ಬೆಲ್ಲ ಎಳ್ಳು ಹಾಗೂ ಉರಿದಕಡಲೆ ಮಿಶ್ರಿತ ಪಾದಾರ್ಥವನ್ನು.ಬಟ್ಟಲಿನಲ್ಲಿ ತುಂಬಿಕೊಂಡು ಮನೆ ಮನೆಗೆ ತೆರಳಿ ಮೆನೆಯ ಮಂದಿಗೆಲ್ಲ ಸಿಹಿ ಹಂಚಿದ್ದಾರೆ. ಈ ಮೂಲಕ ಮಕ್ಕಳು ಸಾಮೂಹಿಕವಾಗಿ ಸಿಹಿ ಹಂಚಿ ಸರ್ವರಿಗೂ ಶುಭಕೋರಿದ್ದಾರೆ. ಶ್ರಿಪೇಟೆಬಸವೇಶ್ವರ ನಗರದ ಮಕ್ಕಳು ಈ ಮೂಲಕ ಪಟ್ಟಣದೆಲ್ಲೆಡೆಗಳಲ್ಲಿ, ಮಕರ ಸಂಕ್ರಾಂತಿ  ಸಿಹಿಯನ್ನು ಹಂಚುವ ಮೂಲಕ ಸರ್ವರಿಗೂ ಸಂಕ್ರಾಂತಿ ಶುಭಾಶಯಗಳನ್ನು ತಿಳಿಸಿದ್ದಾರೆ. ಗಲ್ಲಿಯ ಮಕ್ಕಳು ಪರಸ್ಪರ ಸಿಹಿ ವಿನಿಮಯ ಮಾಡಿಕೊಳ್ಳೋದರ ಮೂಲಕ ಪರಸ್ಪರ ಶುಭಕೋರಿ ಸೌಹಾರ್ಧತೆ ಮೆರೆದರು. ತಾವು ಮನೆಯಿಂದ ತಯಾರಿಸಿಕೊಂಡು ತಂದಿದ್ದ ಸಿಹಿಯನ್ನು ಎಲ್ಲರೂ ಒಟ್ಟಾಗಿ ಗಲ್ಲಿಯ ಪ್ರತಿಯೊಂದು ಮನೆ ಮನೆಗೆ ತೆರಳಿ ಸಿಹಿ ಹಂಚಿ ಶುಭ ಕೋರಿದ್ದಾರೆ. ದಾರಿಯಲ್ಲಿ ಎದುರಾದ ಪ್ರತಿಯೊಬ್ಬ ರಿಗೂ ಸಿಹಿ  ಸಂಕ್ರಾಂತಿ ಶುಭ ಕೋರಿ ವೈಶಿಷ್ಟ್ಯತೆ ಮೆರೆದರು.ಈ ಮೂಲಕ ಮಕ್ಕಳು ಪಟ್ಟಣ ಮಾತ್ರವಲ್ಲ,ತಾಲೂಕಿನ ಮಾಡಿನ ಸಮಸ್ತ ಯುವಪೀಳಿಗೆಗೆ ಮಾದರಿಯಾಗಿದದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು