7:52 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ…

ಇತ್ತೀಚಿನ ಸುದ್ದಿ

ಪುತ್ತೂರು: ರಾಜ್ಯದಲ್ಲೇ 3ನೇ ಅತೀ ಎತ್ತರದ ರಾಷ್ಟ್ರಧ್ವಜ ಸ್ತಂಭ ಸ್ಥಾಪನೆ; 80 ಮೀಟ‌ರ್ ಎತ್ತರ

02/02/2026, 14:07

ಪುತ್ತೂರು(reporterkarnataka.com): ಪುತ್ತೂರು ಮಹಾಲಿಂಗೇಶ್ವರ ದೇವಳದ ಎದುರಿನ ನೆಲ್ಲಿಕಟ್ಟೆಯಲ್ಲಿರುವ ಖಾಸಗಿ ಬಸ್ ನಿಲ್ದಾಣದ ಬಳಿ 1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಾಜ್ಯದ ಮೂರನೇ ಅತಿ ದೊಡ್ಡ ರಾಷ್ಟ್ರ ಧ್ವಜಸ್ತಂಭದಲ್ಲಿ ಭಾನುವಾರ ಸಂಜೆ ಪರೀಕ್ಷಾರ್ಥವಾಗಿ ಕೆಲ ಕಾಲ ತ್ರಿವರ್ಣ ಧ್ವಜ ಹಾರಾಡಿತು.
80 ಮೀಟ‌ರ್ ಎತ್ತರದ ಬೃಹತ್ ರಾಷ್ಟ್ರ ಧ್ವಜಕಂಬ ಅಳವಡಿಕೆ ಕಾರ್ಯ ಭಾನುವಾರ ಬೆಳಿಗ್ಗೆ ಆರಂಭಗೊಂಡಿತು. ಬೃಹತ್ ಕ್ರೇನ್ ಮೂಲಕ ಧ್ವಜಸ್ತಂಭವನ್ನು ಅಳವಡಿಸಿ ಸಂಜೆ ಹೊತ್ತಿಗೆ ಕೆಲ ಕಾಲ ಪರೀಕ್ಷಾರ್ಥವಾಗಿ ರಾಷ್ಟ್ರದ ತ್ರಿವರ್ಣ ಧ್ವಜವನ್ನು ಹಾರಿಸಿ,ಬಳಿಕ ಇಳಿಸಲಾಯಿತು. ಧ್ವಜ ಸ್ತಂಭ ಅಳವಡಿಕೆಯ ವೇಳೆ ಶಾಸಕ ಅಶೋಕ್‌ಕುಮಾ‌ರ್ ರೈ ಮತ್ತಿತರರು ಉಪಸ್ಥಿತರಿದ್ದರು. ಈ ಬೃಹತ್ ಧ್ವಜ ಸ್ತಂಭ ವನ್ನು ಅಳವಡಿಸುವ ವೇಳೆ ನೂರಾರು ಮಂದಿ ಕುತೂಹಲದಿಂದ ವೀಕ್ಷಿಸಿದರು.
ಈ ವೇಳೆ ಮಾತನಾಡಿದ ಶಾಸಕ ಅಶೋಕ್ ರೈ, ಪುತ್ತೂರಿನಲ್ಲಿ ಅತ್ಯಂತ ಎತ್ತರದಲ್ಲಿ ರಾಷ್ಟ್ರಧ್ವಜ ಹಾರಿಸಬೇಕು ಎಂಬುದು ನಮ್ಮ ಕನಸಾಗಿತ್ತು. ಪುತ್ತೂರಿನಲ್ಲಿ ದೇಶ ಪ್ರೇಮ ಏನು ಎಂಬುವುದನ್ನು ತೋರಿಸುತ್ತೇವೆ ಎಂದು 6 ತಿಂಗಳ ಹಿಂದೆಯೇ ಹೇಳಿದ್ದೆ. ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಇಷ್ಟು ಎತ್ತರದಲ್ಲಿ ರಾಷ್ಟ್ರ ಧ್ವಜ ಹಾರಿಸಿದ ಯಾವುದೇ ತಾಲ್ಲೂಕು ರಾಜ್ಯದಲ್ಲಿ ಇಲ್ಲ.
ತಾಲ್ಲೂಕು ಮಟ್ಟದಲ್ಲಿ ರಾಜ್ಯದ ಅತ್ಯಂತ ಎತ್ತರದ 3ನೇ ರಾಷ್ಟ್ರಧ್ವಜ ಸ್ತಂಭ ಇರುವುದು ಪುತ್ತೂರಿನಲ್ಲಿ ಎಂದು ಹೇಳಲು ಇಚ್ಛಿಸುವೆ ಎಂದರು.
ವಾರದೊಳಗೆ ಲೈಟಿಂಗ್ ವ್ಯವಸ್ಥೆ ಮಾಡಿ ರಾಷ್ಟ್ರಧ್ವಜ ಹಾರಿಸುವ ಕೆಲಸ ಮಾಡಲಾಗುವುದು. 2400 ಚದರ ಅಡಿ ಅಗಲದ ರಾಷ್ಟ್ರಧ್ವಜ ಹಾರಾಡಲಿದೆ. ಒಂದು ಧ್ವಜಕ್ಕೆ ₹60 ಸಾವಿರ ವೆಚ್ಚವಿದ್ದು, ವರ್ಷಕ್ಕೆ 3 ಬಾರಿ ಧ್ವಜವನ್ನು ಬದಲಾಯಿಸಬೇಕಾಗುತ್ತದೆ. ಮೈಕಲ್ಲಿ ಭಾಷಣ ಮಾಡಿದ ಮಾತ್ರಕ್ಕೆ ದೇಶ ಪ್ರೇಮ ಬರುವುದಿಲ್ಲ. ಇಂತಹ ವ್ಯವಸ್ಥೆಗಳನ್ನು ಮಾಡಿದರೆ ಮಾತ್ರ ದೇಶ ಪ್ರೇಮ ಬೆಳೆಸಬಹುದಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು