11:23 PM Wednesday31 - December 2025
ಬ್ರೇಕಿಂಗ್ ನ್ಯೂಸ್
ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:…

ಇತ್ತೀಚಿನ ಸುದ್ದಿ

ಪುತ್ತೂರು: ಮನೆಗಳ್ಳತನಕ್ಕೆ ಯತ್ನ; ಆರೋಪಿ ದಂಪತಿಯ ಬಂಧನ; ಬೈಕ್ ವಶ

31/12/2025, 23:02

ಪುತ್ತೂರು(reporterkarnataka.com): ಇಲ್ಲಿನ ಕಸಬಾ ಬಳಿ ಮನೆಯೊಂದರಿಂದ ಕಳ್ಳತನಕ್ಕೆ ಯತ್ನಿಸಿದ ಆರೋಪದ ಮೇಲೆ ದಂಪತಿಯ ಬಂಧಿಸಲಾಗಿದ್ದು, ಅವರು ಬಳಸಿದ ಬೈಕ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪುತ್ತೂರು ಕಸಬಾ ನಿವಾಸಿ ಎ.ವಿ ನಾರಾಯಣ (84) ಎಂಬವರ ಮನೆಗೆ ಡಿ. 17ರಂದು ಮಧ್ಯರಾತ್ರಿ, ಯಾರೋ ಇಬ್ಬರು ಅಪರಿಚಿತ ವ್ಯಕ್ತಿಗಳು, ಹೆಲ್ಮೆಟ್ ಧರಿಸಿಕೊಂಡು, ಮುಖಚಹರೆಯನ್ನು ಮರೆಮಾಚಿ ಮನೆಯಿಂದ ಬೆಲೆ ಬಾಳುವ ಸೊತ್ತುಗಳನ್ನು ಕಳ್ಳತನ ಮಾಡಲು ಮನೆಯ ಹಿಂಬಾಗಿಲಿನಿಂದ ಮನೆಗೆ ಪ್ರವೇಶಿಸಿದ್ದರು. ನಾರಾಯಣ ಹಾಗೂ ಅವರ ಪತ್ನಿಯನ್ನು ಬೆದರಿಸಿದ್ದು, ಈ ವೇಳೆ ನಡೆದ ತಳ್ಳಾಟದಲ್ಲಿ ನಾರಾಯಣ ಅವರ ಪತ್ನಿಗೆ ಗಾಯವಾಗಿದ್ದು, ಜೋರಾಗಿ ಕಿರುಚಿದ್ದಾರೆ. ಇದರಿಂದ ಹೆದರಿದ ಆರೋಪಿಗಳು ಮನೆಯ ಹಿಂಬಾಗಿಲಿನ ಮೂಲಕ ಓಡಿ ಪರಾರಿಯಾಗಿರುತ್ತಾರೆ. ನಾರಾಯಣ ಅವರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 127/2025, ಕಲಂ: 307 ಜೊತೆಗೆ 3(5) ಬಿ ಎನ್ ಎಸ್ 2023 ರಂತೆ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸಿದ ಪುತ್ತೂರು ನಗರ ಪೊಲೀಸರು ಆರೋಪಿಗಳಾದ ಪುತ್ತೂರು, ಮುಡೂರು ನಿವಾಸಿ (ಪ್ರಸ್ತುತ ಬಾಡಿಗೆ ಮನೆ ವಾಸ:ಪಂಜ) ಕಾರ್ತಿಕ್ ರಾವ್ (31) ಮತ್ತು ಆತನ ಪತ್ನಿ ಕೆ.ಎಸ್. ಸ್ವಾತಿ ರಾವ್ (25)ಎಂಬವರನ್ನು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ ಮೋಟಾರು ಸೈಕಲ್‌ನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಕಾರ್ತಿಕ್ ರಾವ್ ಸಹಾಯಕ ಅರ್ಚಕರಾಗಿ ಕೆಲಸ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು