2:54 PM Monday6 - July 2026
ಬ್ರೇಕಿಂಗ್ ನ್ಯೂಸ್
ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ…

ಇತ್ತೀಚಿನ ಸುದ್ದಿ

ಪುತ್ತೂರು: ಮನೆಗಳ್ಳತನಕ್ಕೆ ಯತ್ನ; ಆರೋಪಿ ದಂಪತಿಯ ಬಂಧನ; ಬೈಕ್ ವಶ

31/12/2025, 23:02

ಪುತ್ತೂರು(reporterkarnataka.com): ಇಲ್ಲಿನ ಕಸಬಾ ಬಳಿ ಮನೆಯೊಂದರಿಂದ ಕಳ್ಳತನಕ್ಕೆ ಯತ್ನಿಸಿದ ಆರೋಪದ ಮೇಲೆ ದಂಪತಿಯ ಬಂಧಿಸಲಾಗಿದ್ದು, ಅವರು ಬಳಸಿದ ಬೈಕ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪುತ್ತೂರು ಕಸಬಾ ನಿವಾಸಿ ಎ.ವಿ ನಾರಾಯಣ (84) ಎಂಬವರ ಮನೆಗೆ ಡಿ. 17ರಂದು ಮಧ್ಯರಾತ್ರಿ, ಯಾರೋ ಇಬ್ಬರು ಅಪರಿಚಿತ ವ್ಯಕ್ತಿಗಳು, ಹೆಲ್ಮೆಟ್ ಧರಿಸಿಕೊಂಡು, ಮುಖಚಹರೆಯನ್ನು ಮರೆಮಾಚಿ ಮನೆಯಿಂದ ಬೆಲೆ ಬಾಳುವ ಸೊತ್ತುಗಳನ್ನು ಕಳ್ಳತನ ಮಾಡಲು ಮನೆಯ ಹಿಂಬಾಗಿಲಿನಿಂದ ಮನೆಗೆ ಪ್ರವೇಶಿಸಿದ್ದರು. ನಾರಾಯಣ ಹಾಗೂ ಅವರ ಪತ್ನಿಯನ್ನು ಬೆದರಿಸಿದ್ದು, ಈ ವೇಳೆ ನಡೆದ ತಳ್ಳಾಟದಲ್ಲಿ ನಾರಾಯಣ ಅವರ ಪತ್ನಿಗೆ ಗಾಯವಾಗಿದ್ದು, ಜೋರಾಗಿ ಕಿರುಚಿದ್ದಾರೆ. ಇದರಿಂದ ಹೆದರಿದ ಆರೋಪಿಗಳು ಮನೆಯ ಹಿಂಬಾಗಿಲಿನ ಮೂಲಕ ಓಡಿ ಪರಾರಿಯಾಗಿರುತ್ತಾರೆ. ನಾರಾಯಣ ಅವರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 127/2025, ಕಲಂ: 307 ಜೊತೆಗೆ 3(5) ಬಿ ಎನ್ ಎಸ್ 2023 ರಂತೆ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸಿದ ಪುತ್ತೂರು ನಗರ ಪೊಲೀಸರು ಆರೋಪಿಗಳಾದ ಪುತ್ತೂರು, ಮುಡೂರು ನಿವಾಸಿ (ಪ್ರಸ್ತುತ ಬಾಡಿಗೆ ಮನೆ ವಾಸ:ಪಂಜ) ಕಾರ್ತಿಕ್ ರಾವ್ (31) ಮತ್ತು ಆತನ ಪತ್ನಿ ಕೆ.ಎಸ್. ಸ್ವಾತಿ ರಾವ್ (25)ಎಂಬವರನ್ನು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ ಮೋಟಾರು ಸೈಕಲ್‌ನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಕಾರ್ತಿಕ್ ರಾವ್ ಸಹಾಯಕ ಅರ್ಚಕರಾಗಿ ಕೆಲಸ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು