1:44 PM Wednesday22 - October 2025
ಬ್ರೇಕಿಂಗ್ ನ್ಯೂಸ್
ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ,… ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ

ಇತ್ತೀಚಿನ ಸುದ್ದಿ

ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ, ಮತ್ತೋರ್ವ ಪರಾರಿ

22/10/2025, 13:44

ಪುತ್ತೂರು(reporterkarnataka.com): ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಐಷರ್ ವಾಹನವನ್ನು ತಡೆಯಲು ಯತ್ನಿಸಿದ ಪೊಲೀಸರ ಜೀಪಿಗೆ ಡಿಕ್ಕಿ ಹೊಡೆದು ಕೊಲೆಯತ್ನ ನಡೆಸಿದ ಆರೋಪಿಯನ್ನು ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದ ಘಟನೆ ಬುಧವಾರ ಮುಂಜಾನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಮಂಗಳ ಎಂಬಲ್ಲಿ ನಡೆದಿದೆ.


ಕೇರಳದ ಕಾಸರಗೋಡು ಮೂಲದ ಅಬ್ದುಲ್ಲಾ (40) ಗುಂಡೇಟಿನಿಂದ ಗಾಯಗೊಂಡ ಆರೋಪಿ ಆರೋಪಿಯ ಕಾಲಿಗೆ ಗುಂಡು ಬಿದ್ದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುಧವಾರ ಮುಂಜಾನೆ ಈಶ್ವರಮಂಗಳ ಭಾಗದಲ್ಲಿ ಅಬ್ದುಲ್ಲಾ ಎಂಬಾತ ಚಲಾಯಿಸುತ್ತಿದ್ದ ಐಷರ್ ವಾಹನದಲ್ಲಿ ಸುಮಾರು 10 ಜಾನುವಾರುಗಳನ್ನು ಅನಧಿಕೃತವಾಗಿ ಸಾಗಿಸಲಾಗುತ್ತಿತ್ತು. ವಾಹನದಲ್ಲಿ ಇನ್ನೊಬ್ಬ ಆರೋಪಿಯೂ ಇದ್ದನು. ಈ ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಚಾಲಕ ಅಬ್ದುಲ್ಲಾ ವಾಹನ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ.
ಸುಮಾರು 10 ಕಿ.ಮೀ. ದೂರದವರೆಗೆ ಪೊಲೀಸರು ವಾಹನವನ್ನು ಬೆನ್ನಟ್ಟಿದ್ದಾರೆ. ಈ ವೇಳೆ ಆರೋಪಿಯು ಪೊಲೀಸರ ಜೀಪಿಗೆ ಹಿಂಬದಿಯಿಂದ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿದ್ದಾನೆ.
ಪರಿಸ್ಥಿತಿಯ ಗಂಭೀರತೆಯನ್ನು ಮನಗಂಡ ಪಿಎಸ್‌ಐ ಅವರು ಆತ್ಮರಕ್ಷಣೆ ಹಾಗೂ ಆರೋಪಿಯನ್ನು ಹಿಡಿಯುವ ಸಲುವಾಗಿ ಎರಡು ಸುತ್ತು ಗುಂಡು ಹಾರಿಸಿದ್ದಾರೆ. ಅದರಲ್ಲಿ ಒಂದು ಗುಂಡು ಐಷರ್ ವಾಹನದ ಮೇಲೆ ಬಿದ್ದರೆ, ಮತ್ತೊಂದು ಗುಂಡು ಚಾಲಕ ಅಬ್ದುಲ್ಲಾ ಕಾಲಿಗೆ ತಗುಲಿದೆ. ಗುಂಡೇಟಿನಿಂದ ವಾಹನ ನಿಂತ ಕೂಡಲೇ ಅದರಲ್ಲಿದ್ದ ಮತ್ತೋರ್ವ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಗಾಯಗೊಂಡ ಆರೋಪಿ ಅಬ್ದುಲ್ಲಾನನ್ನು ತಕ್ಷಣವೇ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಆರೋಪಿ ಅಬ್ದುಲ್ಲಾ ಈ ಹಿಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಗೋ ಹತ್ಯೆ ಕಾಯ್ದೆಯಡಿಯಲ್ಲಿಪ್ರಕರಣ ದಾಖಲಾಗಿರುತ್ತದೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಪರಾರಿಯಾದ ಮತ್ತೊಬ್ಬ ಆರೋಪಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು