2:56 PM Friday8 - May 2026
ಬ್ರೇಕಿಂಗ್ ನ್ಯೂಸ್
ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಇತ್ತೀಚಿನ ಸುದ್ದಿ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಿಂದ  ‘ಸಿ’ ಗ್ರೇಡ್ ದೇಗುಲಗಳ 150 ಅರ್ಚಕರುಗಳಿಗೆ  ಆಹಾರದ ಕಿಟ್ ವಿತರಣೆ

29/05/2021, 17:06

ಪುತ್ತೂರು(reporterkarnataka news):

ಎ ಗ್ರೇಡ್ ದೇವಸ್ಥಾನವಾದ ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಪುತ್ತೂರು ತಾಲೂಕಿನ ‘ಸಿ’ ಗ್ರೇಡ್ ದೇವಸ್ಥಾನಗಳ 150 ಅರ್ಚಕರುಗಳಿಗೆ 1500 ರೂ.ಮೌಲ್ಯದ ಆಹಾರದ ಕಿಟ್ ಗಳನ್ನು ಜಿಲ್ಲೆಯಲ್ಲೆ ಪ್ರಥಮ ಬಾರಿಗೆ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ವಿತರಿಸಲಾಯಿತು. 

ಕಾರ್ಯಕ್ರಮದಲ್ಲಿ ಅರ್ಚಕರಿಗೆ ಆಹಾರದ ಕಿಟ್ ವಿತರಣೆ ಜೊತೆಗೆ ಪ್ರತಿ ದೇವಸ್ಥಾನಕ್ಕೆ ತಲಾ ಎರಡರಂತೆ ಬಿಲ್ವಪತ್ರೆ ವಿತರಣೆಯನ್ನು ಪುತ್ತೂರು ಸೇವಾ ಭಾರತಿ ವತಿಯಿಂದ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ಸದಸ್ಯರಾದ ರಾಮಚಂದ್ರ ಕಾಮತ್,  ರಾಮ್ ದಾಸ್ ಗೌಡ,ವೀಣಾ ಬಿ.ಕೆ , ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಮುರಳಿಕೃಷ್ಣ ಹಸಂತಡ್ಕ, ನಿತ್ಯ‌ಕರಸೇವಕ ಕಿರಣ್ ಶಂಕರ್‌ಮಲ್ಯ ಮತ್ತು ಸಿ ಗ್ರೇಡ್ ದೇವಸ್ಥಾನದ ಆಡಳಿತ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು