1:54 AM Thursday19 - February 2026
ಬ್ರೇಕಿಂಗ್ ನ್ಯೂಸ್
ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8…

ಇತ್ತೀಚಿನ ಸುದ್ದಿ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವ: ಭಕ್ತರಿಗೆ ಭೋಜನ ಬಡಿಸಿದ ಶಾಸಕ ಅಶೋಕ ಕುಮಾರ್ ರೈ

14/04/2025, 20:26

ಜಯಾನಂದ ಪೆರಾಜೆ ಪುತ್ತೂರು

info.reporterkarnataka@gmail.com

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ 4ನೇ ದಿನ ಮಧ್ಯಾಹ್ನ ಸುಮಾರು 15,000 ಭಕ್ತರು ಅನ್ನಪ್ರಸಾದ ಸ್ವೀಕರಿಸಿ ಸಂತೃಪ್ತಿಪಟ್ಟರು.


ಮಧ್ಯಾಹ್ನ 12 ಗಂಟೆಗೆ ಅನ್ನ ಸಂತರ್ಪಣೆ ಆರಂಭವಾಗಿ ಕುಳಿತು ಊಟ ಮಾಡುವ ಮತ್ತು ಬಫೆಯಲ್ಲಿ ರುಚಿಕರವಾದ ಊಟದ ವ್ಯವಸ್ಥೆ ಮಾಡಲಾಗಿತ್ತು. ಯಾವುದೇ ನೂಕುನುಗ್ಗಲು ಇರಲಿಲ್ಲ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಮೇಲುಸ್ತುವಾರಿಯಲ್ಲಿ ಶಿಸ್ತುಬದ್ಧವಾದ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲೆ ಮಾತ್ರವಲ್ಲದೆ ಹೊರಜಿಲ್ಲೆಗಳಾದ ಮೈಸೂರು ಮಂಡ್ಯ ಜಿಲ್ಲೆಗಳಿಂದಲೂ ಹೊರೆಕಾಣಿಕೆ ಬಂದಿರುವುದಾಗಿ ತಿಳಿಸಿದರು.
*ಶಾಸಕರ ಭೇಟಿ* ಮಧ್ಯಾಹ್ನ ದೇವಸ್ಥಾನಕ್ಕೆ ಪುತ್ತೂರು ಶಾಸಕ ಅಶೋಕ ರೈ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಅನ್ನಛತ್ರಕ್ಕೆ ತೆರಳಿ ವ್ಯವಸ್ಥೆಯನ್ನು ವೀಕ್ಷಿಸಿ ಸ್ವಚ್ಚತೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಸರತಿ ಸಾಲಿನಲ್ಲಿ ನಿಂತು ಬಫೆ ಊಟ ಸ್ವೀಕರಿಸಿದರು. ಬಳಿಕ ಸ್ವತಃ ಸ್ವಯಂಸೇವಕರ ಜೊತೆ ಸೇರಿ ಅನ್ನ ಬಡಿಸಿ ಗಮನ ಸೆಳೆದರು.
*ಯಾತ್ರಾರ್ಥಿಗಳಿಗೆ ಅನುಕೂಲ:*
ಎರಡು ವರ್ಷಗಳಲ್ಲಿ ಮಹಾಲಿಂಗೇಶ್ವರ ದೇವಸ್ಥಾನ ವನ್ನು ಪ್ರಸಿದ್ಧ ಯಾತ್ರಾಸ್ಥಳವನ್ನಾಗಿ ಮಾರ್ಪಡಿಸಲಾಗುವುದು‌ ಎಂದು ಸುದ್ದಿಗಾರರೊಂದಿಗೆ ಮತನಾಡುತ್ತಾ ತಿಳಿಸಿದರು. ಅಕ್ರಮವಾಗಿದ್ದ ಸ್ಥಳವು ಮಹಾಲಿಂಗೇಶ್ವರ ದೇವರಿಗೆ ಸಮರ್ಪಣೆಯಾಗಿದೆ. ಮುಂದಿನ ದಿನಗಳಲ್ಲಿ ಯಾತ್ರಾರ್ಥಿಗಳಿಗೆ ಬೇಕಾದ ಅನುಕೂಲಗಳನ್ನು ಮಾಡಿಕೊಡಲಾಗುವುದು ಎಂದರು.
ಪ್ರಸಿದ್ಧವಾದ ಕೆರೆಯನ್ನು ಸಂರಕ್ಷಿಸಿ ಭೋಜನಾ ಶಾಲೆ, ವಸತಿ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳಾಗಲಿವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು