2:26 PM Tuesday21 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ಪುತ್ತೂರು: ಜೂನ್ 7ರಂದು ಸಾಮೂಹಿಕ ಸರಸ್ವತೀ ವಂದನೆ ಮತ್ತು ವಿದ್ಯಾ ಸಂಕಲ್ಪ ಕಾರ್ಯಕ್ರಮ

04/06/2026, 18:45

ಪುತ್ತೂರು(reporterkarnataka.com): ದೇವಾಲಯ ಸಂವರ್ಧನಾ ಸಮಿತಿ ಕರ್ನಾಟಕ
(ಪುತ್ತೂರು ತಾಲೂಕು ಮತ್ತು ಗ್ರಾಮಾಂತರ)ಮತ್ತು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪುತ್ತೂರು ಇದರ ಜಂಟಿ ಆಯೋಜಕತ್ವದಲ್ಲಿ ಶ್ರೀ ಮುಂಡ್ಯತ್ತಾಯ ದೈವಸ್ಥಾನ ಪಾಂಗಳಾಯಿ, ಮುಳಿಯ ದೇವರಕಟ್ಟೆ ಕೋರ್ಟ್ ರಸ್ತೆ , ಅಟಲ್ ಉದ್ಯಾನ ಕೊಂಬೆಟ್ಟು , ಮಾಸ್ಟರ್ ಪ್ಲಾನರಿ ಕಲ್ಲೇಗ , ಶ್ರೀ ಷಣ್ಮುಖ ಸುಬ್ರಹ್ಮಣ್ಯ – ಶ್ರೀ ಮಹಾ ವಿಷ್ಣು ದೇವಸ್ಥಾನ ಕೆಮ್ಮಿಂಜೆ, ಶ್ರೀ ರಾಘವೇಂದ್ರ ಮಠ ಕಲ್ಲಾರೆ ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ಕೇಂದ್ರಗಳ ಸಹಯೋಗದೊಂದಿಗೆ ಪ್ರಸ್ತುತ ವರ್ಷದ ಶಾಲಾ ಹಾಗೂ ಕಾಲೇಜುಗಳ ಆರಂಭದ ಪ್ರಯುಕ್ತ ವಿದ್ಯಾರ್ಥಿಗಳಲ್ಲಿ ವಿದ್ಯೆ, ಸಂಸ್ಕಾರ ಹಾಗೂ ಏಕಾಗ್ರತೆಯ ಅಭಿವೃದ್ಧಿಗಾಗಿ “ಸಾಮೂಹಿಕ ಸರಸ್ವತೀ ವಂದನೆ” ಮತ್ತು “ವಿದ್ಯಾ ಸಂಕಲ್ಪ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಸಾಮೂಹಿಕ ಸರಸ್ವತೀ ವಂದನೆ ದಿನಾಂಕ 7 ಜೂನ್ 2026ನೇ ಆದಿತ್ಯವಾರ, ಬೆಳಗ್ಗೆ ಗಂಟೆ 9 ರಿಂದ 11 ವರೆಗೆ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರ ದಲ್ಲಿ ನಡೆಯಲಿದೆ.
ವಿದ್ಯಾ ಸಂಕಲ್ಪ : ವಿದ್ಯಾರ್ಥಿಗಳಿಂದ
ಮಕ್ಕಳಿಂದ ಪುಸ್ತಕಕ್ಕೆ ಪುಷ್ಪಾರ್ಚನೆ
ಸರಸ್ವತೀ ಸೂಕ್ತ ಹವನ : ದೇವಳದ ವೈದಿಕರಿಂದ
ಶಿಶು ಮಂದಿರದಿಂದ ಪ್ರಾರಂಭಿಸಿ ಸ್ನಾತಕೋತ್ತರ ಪದವಿ ವರೆಗಿನ ಸಾರ್ವಜನಿಕ ವಿದ್ಯಾರ್ಥಿಗಳು ಕೂಡ ಭಾಗವಹಿಸಿ ಸರಸ್ವತಿ ಮಾತೆಯ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿ.
ವಿ.ಸೂ : ಮಕ್ಕಳು ಮನೆಯಿಂದ ಬರುವಾಗ
1. ಸಾಂಪ್ರದಾಯಿಕ ಉಡುಗೆ ತೊಡುಗೆ
2. ಒಂದು ಶಾಲಾ ಪುಸ್ತಕ ಅಥವಾ ಸುಜ್ಞಾನ ದೀಪಿಕೆ ಪುಸ್ತಕ
3. ಮನೆಯಲ್ಲೇ ಬೆಳೆದ ಒಂದು ಬೊಗಸೆ ಹೂವು ತಂದರೆ ಉತ್ತಮ
ಸಹಕಾರ : ನಿತ್ಯ ಕರಸೇವಕರು
ಬನ್ನಿ… ಭಾಗವಹಿಸಿ… ದೇವಿಯ ಕೃಪೆಗೆ ಪಾತ್ರರಾಗಿರಿ..

ಇತ್ತೀಚಿನ ಸುದ್ದಿ

ಜಾಹೀರಾತು