6:56 PM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಪುತ್ತೂರು: ಜೂನ್ 7ರಂದು ಸಾಮೂಹಿಕ ಸರಸ್ವತೀ ವಂದನೆ ಮತ್ತು ವಿದ್ಯಾ ಸಂಕಲ್ಪ ಕಾರ್ಯಕ್ರಮ

04/06/2026, 18:45

ಪುತ್ತೂರು(reporterkarnataka.com): ದೇವಾಲಯ ಸಂವರ್ಧನಾ ಸಮಿತಿ ಕರ್ನಾಟಕ
(ಪುತ್ತೂರು ತಾಲೂಕು ಮತ್ತು ಗ್ರಾಮಾಂತರ)ಮತ್ತು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪುತ್ತೂರು ಇದರ ಜಂಟಿ ಆಯೋಜಕತ್ವದಲ್ಲಿ ಶ್ರೀ ಮುಂಡ್ಯತ್ತಾಯ ದೈವಸ್ಥಾನ ಪಾಂಗಳಾಯಿ, ಮುಳಿಯ ದೇವರಕಟ್ಟೆ ಕೋರ್ಟ್ ರಸ್ತೆ , ಅಟಲ್ ಉದ್ಯಾನ ಕೊಂಬೆಟ್ಟು , ಮಾಸ್ಟರ್ ಪ್ಲಾನರಿ ಕಲ್ಲೇಗ , ಶ್ರೀ ಷಣ್ಮುಖ ಸುಬ್ರಹ್ಮಣ್ಯ – ಶ್ರೀ ಮಹಾ ವಿಷ್ಣು ದೇವಸ್ಥಾನ ಕೆಮ್ಮಿಂಜೆ, ಶ್ರೀ ರಾಘವೇಂದ್ರ ಮಠ ಕಲ್ಲಾರೆ ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ಕೇಂದ್ರಗಳ ಸಹಯೋಗದೊಂದಿಗೆ ಪ್ರಸ್ತುತ ವರ್ಷದ ಶಾಲಾ ಹಾಗೂ ಕಾಲೇಜುಗಳ ಆರಂಭದ ಪ್ರಯುಕ್ತ ವಿದ್ಯಾರ್ಥಿಗಳಲ್ಲಿ ವಿದ್ಯೆ, ಸಂಸ್ಕಾರ ಹಾಗೂ ಏಕಾಗ್ರತೆಯ ಅಭಿವೃದ್ಧಿಗಾಗಿ “ಸಾಮೂಹಿಕ ಸರಸ್ವತೀ ವಂದನೆ” ಮತ್ತು “ವಿದ್ಯಾ ಸಂಕಲ್ಪ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಸಾಮೂಹಿಕ ಸರಸ್ವತೀ ವಂದನೆ ದಿನಾಂಕ 7 ಜೂನ್ 2026ನೇ ಆದಿತ್ಯವಾರ, ಬೆಳಗ್ಗೆ ಗಂಟೆ 9 ರಿಂದ 11 ವರೆಗೆ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರ ದಲ್ಲಿ ನಡೆಯಲಿದೆ.
ವಿದ್ಯಾ ಸಂಕಲ್ಪ : ವಿದ್ಯಾರ್ಥಿಗಳಿಂದ
ಮಕ್ಕಳಿಂದ ಪುಸ್ತಕಕ್ಕೆ ಪುಷ್ಪಾರ್ಚನೆ
ಸರಸ್ವತೀ ಸೂಕ್ತ ಹವನ : ದೇವಳದ ವೈದಿಕರಿಂದ
ಶಿಶು ಮಂದಿರದಿಂದ ಪ್ರಾರಂಭಿಸಿ ಸ್ನಾತಕೋತ್ತರ ಪದವಿ ವರೆಗಿನ ಸಾರ್ವಜನಿಕ ವಿದ್ಯಾರ್ಥಿಗಳು ಕೂಡ ಭಾಗವಹಿಸಿ ಸರಸ್ವತಿ ಮಾತೆಯ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿ.
ವಿ.ಸೂ : ಮಕ್ಕಳು ಮನೆಯಿಂದ ಬರುವಾಗ
1. ಸಾಂಪ್ರದಾಯಿಕ ಉಡುಗೆ ತೊಡುಗೆ
2. ಒಂದು ಶಾಲಾ ಪುಸ್ತಕ ಅಥವಾ ಸುಜ್ಞಾನ ದೀಪಿಕೆ ಪುಸ್ತಕ
3. ಮನೆಯಲ್ಲೇ ಬೆಳೆದ ಒಂದು ಬೊಗಸೆ ಹೂವು ತಂದರೆ ಉತ್ತಮ
ಸಹಕಾರ : ನಿತ್ಯ ಕರಸೇವಕರು
ಬನ್ನಿ… ಭಾಗವಹಿಸಿ… ದೇವಿಯ ಕೃಪೆಗೆ ಪಾತ್ರರಾಗಿರಿ..

ಇತ್ತೀಚಿನ ಸುದ್ದಿ

ಜಾಹೀರಾತು