7:39 AM Sunday9 - November 2025
ಬ್ರೇಕಿಂಗ್ ನ್ಯೂಸ್
ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌…

ಇತ್ತೀಚಿನ ಸುದ್ದಿ

ಪುತ್ತೂರು: ಮುಳಿಯ ನವೀಕೃತ, ವಿಸ್ತೃತ ಶೋರೂಂ ‘ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್’ ಏ.20ರಂದು ಉದ್ಘಾಟನೆ

15/04/2025, 19:28

ಚಿತ್ರ: ಅನುಷ್ ಪಂಡಿತ್ ಮಂಗಳೂರು
ಪುತ್ತೂರು(reporterkarnataka.com): ಸುಮಾರು 80 ವರ್ಷಗಳ ಇತಿಹಾಸವಿರುವ ಪುತ್ತೂರಿನ ಮುಳಿಯ ಚಿನ್ನದ ಮಳಿಗೆಯ ನವೀಕೃತ ವಿಸ್ತೃತ ಶೋರೂಂ ‘ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್’ ಎಂಬ ಹೊಸ ಹೆಸರಿನೊಂದಿಗೆ ಏ.20ರಂದು ಬೆಳಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿದೆ.
ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಅವರು ನೂತನ ಶೋರೂಂಗೆ ಚಾಲನೆ ನೀಡಲಿದ್ದಾರೆ. ಪುತ್ತೂರಿನ ಕೋರ್ಟ್ ರಸ್ತೆಯಲ್ಲಿರುವ ಈ ಮಳಿಗೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹಾಗೂ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಅವರು ತಿಳಿಸಿದರು.
ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಮ್ಮ ಹೆಮ್ಮೆ. ಗ್ರಾಹಕರಿಗೆ ಯಾವಾಗಲೂ ಹೊಸತನ ನೀಡುವುದು ಮುಳಿಯದ ವಿಶೇಷತೆ. ಈ ಹೊಸ ಶೋರೂಂ ನಂಬಿಕೆ ಮತ್ತು ಪರಂಪರೆಯ ಜೊತೆಗೆ ಮುಳಿಯದ ಸಾಮಾಜಿಕ ಜವಾಬ್ದಾರಿಯ ಸೇವೆಯೊಂದಿಗೆ ಗ್ರಾಹಕರಿಗೆ ಸಂತೃಪ್ತಿ ಮತ್ತು ಸಂತೋಷ ನೀಡುತ್ತಾ ಬಂದಿದೆ. ಇನ್ನಷ್ಟು ದುಪ್ಪಟ್ಟು ಸಂತೋಷ ನೀಡುವಲ್ಲಿ ಸದಾ ಹೆಚ್ಚು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲಿದೆ ಎಂದು ಕೇಶವ ಪ್ರಸಾದ್ ಮುಳಿಯ ಹೇಳಿದರು.


ಕಳೆದ ಮೂರು ತಲೆಮಾರಿನಿಂದ ಜನತೆಯ ವಿಶ್ವಾಸಗಳಿಸಿ ಬೆಳೆಯುತ್ತಿರುವ ನಮ್ಮ ಸಂಸ್ಥೆ, ಜನರಿಗೆ ಚಿನ್ನದೊಂದಿಗೆ ಸಂತೃಪ್ತಿ, ಸಂತೋಷವನ್ನು ನೀಡಿದೆ. ನೀವು ಮನಸಾರೆ ನಮ್ಮನ್ನು ಹರಸಿದ್ದೀರಿ. ಮುಂದಿನ ದಿನಗಳಲ್ಲಿ ಮತ್ತಷ್ಟು ಹೊಸತನದೊಂದಿಗೆ ಬರುತ್ತಿದ್ದೇವೆ ಎಂದು ಕೃಷ್ಣ ನಾರಾಯಣ ಮುಳಿಯ ನುಡಿದರು.
ಅನಾವರಣಗೊಳ್ಳಲಿರುವ ಈ ಅತ್ಯಾಧುನಿಕ ಶೈಲಿ ಮತ್ತು ವಿನ್ಯಾಸದ 4 ಅಂತಸ್ತಿನ ವಿಶಾಲ ಶೋರೂಂನಲ್ಲಿ ಚಿನ್ನ, ಬೆಳ್ಳಿ, ವಜ್ರ, ಆಧುನಿಕ ಬ್ರಾಂಡೆಡ್ ವಾಚುಗಳು, ಗಿಫ್ಟ್ ಐಟಂ ಹಾಗೂ ವಿವಿಧ ಬಗೆಯ ಚಿನ್ನಾಭರಣಗಳ ಕೌಂಟರ್ ಗಳು ಇರಲಿವೆ. ನಮ್ಮ ಬೆಂಗಳೂರು, ಬೆಳ್ತಂಗಡಿ, ಮಡಿಕೇರಿ ಶೋ ರೂಂಗಳು ಮತ್ತಷ್ಟು ವಿಶಾಲವಾಗಿ ನವೀಕೃತಗೊಳ್ಳುತ್ತಿವೆ. ಗೋಣಿಕೊಪ್ಪದಲ್ಲಿ ನಮ್ಮದೇ ಆದ ಶೋರೂಂ ನಿರ್ಮಾಣಗೊಳ್ಳಲಿದೆ‌. ವಿಶಾಲ ಪಾರ್ಕಿಂಗ್, ಗ್ರಾಹಕರಿಗೆ ಊಟ, ತಿಂಡಿಯ ವ್ಯವಸ್ಥೆ, ಮಕ್ಕಳ ಆಟ ಮತ್ತು ಆರೈಕೆಗೆ ವಿಶೇಷ ಕೊಠಡಿ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾರ್ಕೆಟಿಂಗ್ ಕನ್ಸಲ್ಟೆನ್ಸ್ ವೇಣು ಶರ್ಮ, ಶೋರೂಂ ಸಹ ಪ್ರಬಂಧಕ ರಾಘವೇಂದ್ರ ಪಾಟೀಲ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು